ಸಿನಿಮಾದಲ್ಲಿ ಬಾಣಸಿಗನ ಪಾತ್ರದಲ್ಲಿ ರಂಗಾಯಣ ರಘು, ಪೊಲೀಸ್ ಅಧಿಕಾರಿಯಾಗಿ ಗೋಪಾಲಕೃಷ್ಣ ದೇಶಪಾಂಡೆ ಬಣ್ಣ ಹಚ್ಚಿದ್ದಾರೆ. ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ ಮತ್ತಿತರರು ತಾರಾಬಳಗದಲ್ಲಿದ್ದಾರೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ವಿಶ್ವಜಿತ್ ರಾವ್ ಛಾಯಾಚಿತ್ರಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ ಸಿನಿಮಾಗಿದೆ. ಮಲೆನಾಡಿನಲ್ಲೇ ಇಡೀ ಸಿನಿಮಾದ ಚಿತ್ರೀಕರಣ ನಡೆದಿದ್ದು, ಇಲ್ಲಿನವರೇ ಈ ಸಿನಿಮಾಗೆ ಕೆಲಸ ಮಾಡಿರುವುದು ವಿಶೇಷ. ಈಗಾಗಲೇ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಫೆಬ್ರುವರಿ ತಿಂಗಳಲ್ಲಿ ಸಿನಿಮಾ ರಿಲೀಸ್ಗೆ ಸಿದ್ಧತೆ ನಡೆಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭಿಸಿದೆ. ಈ ಸಿನಿಮಾವನ್ನು ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಮಾಡಲಿದೆ.