ಜ್ಯೂನಿಯರ್ ಆರ್ಟಿಸ್ಟ್ ‘ಅನಿಲ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಶರಣ್ ನಾನಾವತಾರಗಳನ್ನು ಎತ್ತಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದರು. ಸಾಯಿಕುಮಾರ್, ಶ್ರೀನಗರ ಕಿಟ್ಟಿ,ಸುಧಾರಾಣಿ, ಅಶುತೋಷ್ ರಾಣಾ, ಬಾಲಾಜಿ ಮನೋಹರ್, ಬಿ.ಸುರೇಶ್ ಚಿತ್ರದ ತಾರಾಗಣದಲ್ಲಿದ್ದಾರೆ. ಛಾಯಾಗ್ರಾಹಕ ವಿಲಿಯಂ ಡೇವಿಡ್ ಹಾಗೂ ಅರ್ಜುನ್ ಜನ್ಯ ಅವರ ಕೈಚಳಕ ಮೊದಲ ಭಾಗಕ್ಕೆ ಪೂರಕವಾಗಿತ್ತು. ಪುಷ್ಕರ ಮಲ್ಲಿಕಾರ್ಜುನಯ್ಯ ಅವರು ನಿರ್ಮಾಣ ಮಾಡಿರುವ ಈ ಚಿತ್ರವು ಎರಡು ಭಾಗಗಳಲ್ಲಿ ತೆರೆಕಾಣುತ್ತಿದ್ದು, ಎರಡನೇ ಭಾಗ ಯಾವಾಗ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಎನ್ನುವುದನ್ನು ಚಿತ್ರತಂಡ ಇನ್ನಷ್ಟೇ ಘೋಷಿಸಬೇಕಾಗಿದೆ.