<p>ಅರವಿಂದ್ ಕೌಶಿಕ್ ನಿರ್ದೇಶನದ ‘ಶಾರ್ದೂಲ’ ಚಿತ್ರಕ್ಕೆ ಕರ್ನಾಟಕಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದೆ.</p>.<p>ಥ್ರಿಲ್ಲರ್ ಕಥಾಹಂದರದ ಈ ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ಕುತೂಹಲ ಮೂಡಿಸುವಂತಿದೆ. ಇಬ್ಬರು ನಾಯಕರು ಮತ್ತು ಇಬ್ಬರು ನಾಯಕಿಯರು ಈ ಚಿತ್ರದಲ್ಲಿದ್ದಾರೆ.</p>.<p>ಕೊರೊನೊ ಕಾರಣಕ್ಕೆ ಸಿನಿಮಾ ಬಿಡುಗಡೆ ವಿಳಂಬವಾಗಿದ್ದು, ಅನುಮತಿ ದೊರಕಿದ ಕೂಡಲೆ ಚಿತ್ರವನ್ನು ಚಿತ್ರಮಂದಿರದಲ್ಲಿ ಅಥವಾ ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.</p>.<p>‘ಒಟಿಟಿ ವೇದಿಕೆಗಳಲ್ಲೂ ಚಿತ್ರ ಬಿಡುಗಡೆ ಮಾಡಲು ಮಾತುಕತೆ ನಡೆಯುತ್ತಿದೆ. ಮಾತುಕತೆ ಫಲಪ್ರದವಾದರೆಅಮೆಜಾನ್ ಪ್ರೈಮ್ ಅಥವಾ ನೆಟ್ಫ್ಲಿಕ್ಸ್ನಲ್ಲೂ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ’ ಎನ್ನುತ್ತಾರೆ ನಿರ್ಮಾಪಕರು.</p>.<p>‘ನಮ್ ಏರಿಯಲ್ಲೊಂದು ದಿನ’, ‘ತುಘಲಕ್’ ಹಾಗೂ ‘ಹುಲಿರಾಯ’ ಚಿತ್ರಗಳನ್ನು ಅರವಿಂದ್ ಕೌಶಿಕ್ನಿರ್ದೇಶಿಸಿದ್ದರು.‘ಶಾರ್ದೂಲ’ ಚಿತ್ರಕ್ಕೆ ಅರವಿಂದ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ‘ದೆವ್ವ ಇರಬಹುದ್ದಾ? ಎಂಬ ಅಡಿಬರಹ ಈ ಚಿತ್ರಕ್ಕಿದೆ.</p>.<p>‘ಪಿಯುಸಿ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಚೇತನ್ ಚಂದ್ರ, ನಿರ್ದೇಶಕ ಮತ್ತು ನಟ ರವಿತೇಜ, ಕೃತಿಕಾ ರವೀಂದ್ರ, ಐಶ್ವರ್ಯ ಪ್ರಸಾದ್, ಕಲ್ಯಾಣ್, ಹೃಷಿಕೇಶ್, ಮಹೇಶ್ ತಾರಾಗಣದಲ್ಲಿದ್ದಾರೆ.</p>.<p>ಭೈರವ ಸಿನಿಮಾಸ್ ಲಾಂಛನದಡಿ ಕಲ್ಯಾಣ್ ಸಿ. ಮತ್ತು ರೋಹಿತ್ ಎಸ್. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<p>ಛಾಯಾಗ್ರಹಣ ವೈ.ಜಿ.ಆರ್ ಮನು, ಸಂಗೀತಸತೀಶ್ ಬಾಬು, ಸಂಕಲನಶಿವರಾಜ್ ಮೇಹು ಹಾಗೂ ಮಾಸ್ ಮಾದ, ಸಾಹಸ ನಿರ್ದೇಶನಅಲ್ಟಿಮೇಟ್ ಶಿವ ಅವರದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರವಿಂದ್ ಕೌಶಿಕ್ ನಿರ್ದೇಶನದ ‘ಶಾರ್ದೂಲ’ ಚಿತ್ರಕ್ಕೆ ಕರ್ನಾಟಕಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದೆ.</p>.<p>ಥ್ರಿಲ್ಲರ್ ಕಥಾಹಂದರದ ಈ ಚಿತ್ರದ ಟ್ರೇಲರ್ ವಿಭಿನ್ನವಾಗಿದ್ದು, ಕುತೂಹಲ ಮೂಡಿಸುವಂತಿದೆ. ಇಬ್ಬರು ನಾಯಕರು ಮತ್ತು ಇಬ್ಬರು ನಾಯಕಿಯರು ಈ ಚಿತ್ರದಲ್ಲಿದ್ದಾರೆ.</p>.<p>ಕೊರೊನೊ ಕಾರಣಕ್ಕೆ ಸಿನಿಮಾ ಬಿಡುಗಡೆ ವಿಳಂಬವಾಗಿದ್ದು, ಅನುಮತಿ ದೊರಕಿದ ಕೂಡಲೆ ಚಿತ್ರವನ್ನು ಚಿತ್ರಮಂದಿರದಲ್ಲಿ ಅಥವಾ ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.</p>.<p>‘ಒಟಿಟಿ ವೇದಿಕೆಗಳಲ್ಲೂ ಚಿತ್ರ ಬಿಡುಗಡೆ ಮಾಡಲು ಮಾತುಕತೆ ನಡೆಯುತ್ತಿದೆ. ಮಾತುಕತೆ ಫಲಪ್ರದವಾದರೆಅಮೆಜಾನ್ ಪ್ರೈಮ್ ಅಥವಾ ನೆಟ್ಫ್ಲಿಕ್ಸ್ನಲ್ಲೂ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ’ ಎನ್ನುತ್ತಾರೆ ನಿರ್ಮಾಪಕರು.</p>.<p>‘ನಮ್ ಏರಿಯಲ್ಲೊಂದು ದಿನ’, ‘ತುಘಲಕ್’ ಹಾಗೂ ‘ಹುಲಿರಾಯ’ ಚಿತ್ರಗಳನ್ನು ಅರವಿಂದ್ ಕೌಶಿಕ್ನಿರ್ದೇಶಿಸಿದ್ದರು.‘ಶಾರ್ದೂಲ’ ಚಿತ್ರಕ್ಕೆ ಅರವಿಂದ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ‘ದೆವ್ವ ಇರಬಹುದ್ದಾ? ಎಂಬ ಅಡಿಬರಹ ಈ ಚಿತ್ರಕ್ಕಿದೆ.</p>.<p>‘ಪಿಯುಸಿ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಚೇತನ್ ಚಂದ್ರ, ನಿರ್ದೇಶಕ ಮತ್ತು ನಟ ರವಿತೇಜ, ಕೃತಿಕಾ ರವೀಂದ್ರ, ಐಶ್ವರ್ಯ ಪ್ರಸಾದ್, ಕಲ್ಯಾಣ್, ಹೃಷಿಕೇಶ್, ಮಹೇಶ್ ತಾರಾಗಣದಲ್ಲಿದ್ದಾರೆ.</p>.<p>ಭೈರವ ಸಿನಿಮಾಸ್ ಲಾಂಛನದಡಿ ಕಲ್ಯಾಣ್ ಸಿ. ಮತ್ತು ರೋಹಿತ್ ಎಸ್. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<p>ಛಾಯಾಗ್ರಹಣ ವೈ.ಜಿ.ಆರ್ ಮನು, ಸಂಗೀತಸತೀಶ್ ಬಾಬು, ಸಂಕಲನಶಿವರಾಜ್ ಮೇಹು ಹಾಗೂ ಮಾಸ್ ಮಾದ, ಸಾಹಸ ನಿರ್ದೇಶನಅಲ್ಟಿಮೇಟ್ ಶಿವ ಅವರದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>