<p>ಬಹುತೇಕ ಹೊಸರಿಂದ ಕೂಡಿರುವ ‘ಶಿಖಂಡಿ’ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಗುರುಮೂರ್ತಿ ವಿ. ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಇವರು ಈ ಹಿಂದೆ ‘ಮಾರಕಾಸ್ತ್ರ’ ಚಿತ್ರವನ್ನು ನಿರ್ದೇಶಿಸಿದ್ದರು. </p>.<p>‘ಮಹಾಭಾರತದಲ್ಲಿ ಬರುವ ಶಿಖಂಡಿ ಪಾತ್ರವೇ ನಮ್ಮ ಚಿತ್ರದ ಕಥೆಗೆ ಸ್ಫೂರ್ತಿ. ಆತ ಪುನರ್ಜನ್ಮ ಪಡೆದು ತನ್ನ ಸೇಡನ್ನು ತೀರಿಸಿಕೊಳ್ಳುವುದನ್ನು ನಾವೆಲ್ಲ ಕೇಳಿದ್ದೇವೆ. ಈ ಅಂಶವನ್ನೇ ಪ್ರಧಾನವಾಗಿಟ್ಟುಕೊಂಡು ಈ ಚಿತ್ರದ ಕಥೆ ಹೆಣೆಯಲಾಗಿದೆ. ಸಸ್ಪೆನ್ಸ್, ಥ್ರಿಲ್ಲರ್, ಹಾರರ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಇರುವ ಕೌಟುಂಬಿಕ ಕಥಾಹಂದರದ ಚಿತ್ರವಿದು. ಚಿತ್ರೀಕರಣ ಮುಗಿದಿದ್ದು, ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಲೋಚನೆ ಇದೆ’ ಎಂದರು ನಿರ್ದೇಶಕ. </p>.<p>ಪೋಲಾ ಪ್ರವೀಣ್ ಕುಮಾರ್ ಚಿತ್ರದ ನಿರ್ಮಾಪಕ. ಯುವರಾಜ್ ಗೌಡಗೆ ಖ್ಯಾತಿ ಜೋಡಿಯಾಗಿದ್ದಾರೆ. ನೀತು, ಚಾಂದಿನಿ, ರಘು ರಾಮನಕೊಪ್ಪ, ದೀಪಕ್ ಶೆಟ್ಟಿ, ವಿಜಯ್ ಚೆಂಡೂರ್ ಮುಂತಾದವರು ಚಿತ್ರದಲ್ಲಿದ್ದಾರೆ. ಸ್ವಾಮಿ ಛಾಯಾಚಿತ್ರಗ್ರಹಣ, ಮಂಜುಕವಿ ಸಂಗೀತ, ಪ್ರದ್ಯೋತನ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಹುತೇಕ ಹೊಸರಿಂದ ಕೂಡಿರುವ ‘ಶಿಖಂಡಿ’ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಗುರುಮೂರ್ತಿ ವಿ. ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಇವರು ಈ ಹಿಂದೆ ‘ಮಾರಕಾಸ್ತ್ರ’ ಚಿತ್ರವನ್ನು ನಿರ್ದೇಶಿಸಿದ್ದರು. </p>.<p>‘ಮಹಾಭಾರತದಲ್ಲಿ ಬರುವ ಶಿಖಂಡಿ ಪಾತ್ರವೇ ನಮ್ಮ ಚಿತ್ರದ ಕಥೆಗೆ ಸ್ಫೂರ್ತಿ. ಆತ ಪುನರ್ಜನ್ಮ ಪಡೆದು ತನ್ನ ಸೇಡನ್ನು ತೀರಿಸಿಕೊಳ್ಳುವುದನ್ನು ನಾವೆಲ್ಲ ಕೇಳಿದ್ದೇವೆ. ಈ ಅಂಶವನ್ನೇ ಪ್ರಧಾನವಾಗಿಟ್ಟುಕೊಂಡು ಈ ಚಿತ್ರದ ಕಥೆ ಹೆಣೆಯಲಾಗಿದೆ. ಸಸ್ಪೆನ್ಸ್, ಥ್ರಿಲ್ಲರ್, ಹಾರರ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಇರುವ ಕೌಟುಂಬಿಕ ಕಥಾಹಂದರದ ಚಿತ್ರವಿದು. ಚಿತ್ರೀಕರಣ ಮುಗಿದಿದ್ದು, ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಆಲೋಚನೆ ಇದೆ’ ಎಂದರು ನಿರ್ದೇಶಕ. </p>.<p>ಪೋಲಾ ಪ್ರವೀಣ್ ಕುಮಾರ್ ಚಿತ್ರದ ನಿರ್ಮಾಪಕ. ಯುವರಾಜ್ ಗೌಡಗೆ ಖ್ಯಾತಿ ಜೋಡಿಯಾಗಿದ್ದಾರೆ. ನೀತು, ಚಾಂದಿನಿ, ರಘು ರಾಮನಕೊಪ್ಪ, ದೀಪಕ್ ಶೆಟ್ಟಿ, ವಿಜಯ್ ಚೆಂಡೂರ್ ಮುಂತಾದವರು ಚಿತ್ರದಲ್ಲಿದ್ದಾರೆ. ಸ್ವಾಮಿ ಛಾಯಾಚಿತ್ರಗ್ರಹಣ, ಮಂಜುಕವಿ ಸಂಗೀತ, ಪ್ರದ್ಯೋತನ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>