<p>ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಪತಿ ರಾಜ್ ಕುಂದ್ರಾ ಬಂಧನದ ಬಳಿಕ ಮೊದಲ ಬಾರಿಗೆ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದಾರೆ.</p>.<p>ಜೀವನದಲ್ಲಿ ಸಕಾರಾತ್ಮಕ ಚಿಂತನೆಗಳ ಮೂಲಕ ಮುನ್ನಡೆಯಬೇಕು ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ.</p>.<p>ಕೋವಿಡ್ ನಿಧಿ ಸಂಗ್ರಹ ಅಭಿಯಾನ ನಡೆಸುತ್ತಿರುವ ’ವಿ ಫಾರ್ ಇಂಡಿಯಾ’ ಸಂಸ್ಥೆಯ ಪರವಾದ ಪ್ರಚಾರ ವಿಡಿಯೊದಲ್ಲಿ ಶಿಲ್ಪಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ.</p>.<p>ಈ ವಿಡಿಯೊದಲ್ಲಿ ಪ್ರಾಣಯಾಮ, ಆರೋಗ್ಯ ಹಾಗೂ ಸಕರಾತ್ಮ ಚಿಂತನೆಗಳ ಬಗ್ಗೆ ಮಾತನಾಡಿದ್ದಾರೆ. ನಾವು ಈಗ ಕಷ್ಟದ ಪರಿಸ್ಥಿತಿಯಲ್ಲಿ ಇದ್ದೇವೆ, ದೈಹಿಕ ಆರೋಗ್ಯ ಕಪಾಡಿಕೊಳ್ಳುವುದರ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದ್ದಾರೆ.</p>.<p>ನಾವು ಪ್ರಾಣಯಾಮ ಮಾಡುವುದರಿಂದ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುತ್ತದೆ. ಇದರಿಂದ ನಿದ್ರಾಹೀನತೆ ಸಮಸ್ಯೆಗಳು ನಿವಾರಣೆಯಾಗುತ್ತವೆ. ಆ ಮೂಲಕ ಮನಸ್ಸು ಪ್ರಫುಲ್ಲಗೊಂಡು ಧನಾತ್ಮಕ ಚಿಂತನೆಗಳು ಬೆಳೆಯುತ್ತವೆ ಎಂದು ಹೇಳಿದ್ದಾರೆ.</p>.<p>ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರ ಬಂಧನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಪತಿ ರಾಜ್ ಕುಂದ್ರಾ ಬಂಧನದ ಬಳಿಕ ಮೊದಲ ಬಾರಿಗೆ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದಾರೆ.</p>.<p>ಜೀವನದಲ್ಲಿ ಸಕಾರಾತ್ಮಕ ಚಿಂತನೆಗಳ ಮೂಲಕ ಮುನ್ನಡೆಯಬೇಕು ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ.</p>.<p>ಕೋವಿಡ್ ನಿಧಿ ಸಂಗ್ರಹ ಅಭಿಯಾನ ನಡೆಸುತ್ತಿರುವ ’ವಿ ಫಾರ್ ಇಂಡಿಯಾ’ ಸಂಸ್ಥೆಯ ಪರವಾದ ಪ್ರಚಾರ ವಿಡಿಯೊದಲ್ಲಿ ಶಿಲ್ಪಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ.</p>.<p>ಈ ವಿಡಿಯೊದಲ್ಲಿ ಪ್ರಾಣಯಾಮ, ಆರೋಗ್ಯ ಹಾಗೂ ಸಕರಾತ್ಮ ಚಿಂತನೆಗಳ ಬಗ್ಗೆ ಮಾತನಾಡಿದ್ದಾರೆ. ನಾವು ಈಗ ಕಷ್ಟದ ಪರಿಸ್ಥಿತಿಯಲ್ಲಿ ಇದ್ದೇವೆ, ದೈಹಿಕ ಆರೋಗ್ಯ ಕಪಾಡಿಕೊಳ್ಳುವುದರ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದ್ದಾರೆ.</p>.<p>ನಾವು ಪ್ರಾಣಯಾಮ ಮಾಡುವುದರಿಂದ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುತ್ತದೆ. ಇದರಿಂದ ನಿದ್ರಾಹೀನತೆ ಸಮಸ್ಯೆಗಳು ನಿವಾರಣೆಯಾಗುತ್ತವೆ. ಆ ಮೂಲಕ ಮನಸ್ಸು ಪ್ರಫುಲ್ಲಗೊಂಡು ಧನಾತ್ಮಕ ಚಿಂತನೆಗಳು ಬೆಳೆಯುತ್ತವೆ ಎಂದು ಹೇಳಿದ್ದಾರೆ.</p>.<p>ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರ ಬಂಧನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>