<p><strong>ಮುಂಬೈ</strong>: ₹60 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p><p>ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಉದ್ಯಮಿಯೊಬ್ಬರಿಗೆ ₹60 ಕೋಟಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಜುಹು ಠಾಣೆಯಲ್ಲಿ ದಂಪತಿ ವಿರುದ್ಧ ಆ.14ರಂದು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಪ್ರಕರಣ ದಾಖಲಿಸಿತ್ತು.</p>.ಸುಳ್ಳು ಸುದ್ದಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ: ಸಿ.ಟಿ. ರವಿ ಎಚ್ಚರಿಕೆ.ತಮಿಳು ನಟ ಅಭಿನಯ್ ಕಿಂಗರ್ ನಿಧನ. <p>'ಎಫ್ಐಆರ್ ರದ್ದುಗೊಳಿಸುವಂತೆ ಕೋರುವುದರ ಜೊತೆಗೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿ ಸಲ್ಲಿಸದಂತೆ ಹಾಗೂ ಅರ್ಜಿಗಳ ವಿಚಾರಣೆ ನಡೆಯುವವರೆಗೆ ನಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ' ಶಿಲ್ಪಾ ಶೆಟ್ಟಿ ಮತ್ತು ಕುಂದ್ರಾ ನ್ಯಾಯಾಲಯದ ಮೊರೆ ಹೋಗಿದ್ದಾರೆ.</p><p>ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಂಕಡ್ ಅವರಿದ್ದ ಪೀಠವು ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಿದೆ.</p><p>ಕಂಪನಿಯ ಕುಸಿತಕ್ಕೆ ಅನಿರೀಕ್ಷಿತ ಆರ್ಥಿಕ ಪರಿಸ್ಥಿತಿಗಳು ಕಾರಣ. ಉದ್ಯಮ ಮತ್ತು ಹೂಡಿಕೆಯಲ್ಲಿ ನಷ್ಟವಾಗಿದೆ ಹೊರತು ನಾವು ವಂಚಿಸಿಲ್ಲ ಎಂದು ದಂಪತಿ ಅರ್ಜಿಯಲ್ಲಿ ತಿಳಿಸಿದ್ದಾರೆ.</p>.ಮಸ್ಕಿ: ಅವ್ಯವಹಾರ– ತಲೇಖಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಸದಸ್ಯತ್ವ ರದ್ದು.ಬಿಗ್ಬಾಸ್ನಲ್ಲಿ ರಕ್ಷಿತಾಳದ್ದು ಬರೀ ನಾಟಕ, ನಾನು ಕೂಡ ಮಂಗಳೂರಿನವನು: ಧ್ರುವಂತ್.ದೋಣಿಯಲ್ಲೇ ಚಹಾ ಅಂಗಡಿ ತೆರೆದ ವೃದ್ಧೆ; ನೆಟ್ಟಿಗರ ಮೆಚ್ಚುಗೆ.ರಾಯಚೂರು ಬಳಿ ಕಾರು ಅಪಘಾತ: ಗಬ್ಬೂರು PSI ಅರುಣ್ಗೆ ಗಂಭೀರ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ₹60 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p><p>ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಉದ್ಯಮಿಯೊಬ್ಬರಿಗೆ ₹60 ಕೋಟಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಜುಹು ಠಾಣೆಯಲ್ಲಿ ದಂಪತಿ ವಿರುದ್ಧ ಆ.14ರಂದು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಪ್ರಕರಣ ದಾಖಲಿಸಿತ್ತು.</p>.ಸುಳ್ಳು ಸುದ್ದಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ: ಸಿ.ಟಿ. ರವಿ ಎಚ್ಚರಿಕೆ.ತಮಿಳು ನಟ ಅಭಿನಯ್ ಕಿಂಗರ್ ನಿಧನ. <p>'ಎಫ್ಐಆರ್ ರದ್ದುಗೊಳಿಸುವಂತೆ ಕೋರುವುದರ ಜೊತೆಗೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿ ಸಲ್ಲಿಸದಂತೆ ಹಾಗೂ ಅರ್ಜಿಗಳ ವಿಚಾರಣೆ ನಡೆಯುವವರೆಗೆ ನಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ' ಶಿಲ್ಪಾ ಶೆಟ್ಟಿ ಮತ್ತು ಕುಂದ್ರಾ ನ್ಯಾಯಾಲಯದ ಮೊರೆ ಹೋಗಿದ್ದಾರೆ.</p><p>ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಂಕಡ್ ಅವರಿದ್ದ ಪೀಠವು ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಿದೆ.</p><p>ಕಂಪನಿಯ ಕುಸಿತಕ್ಕೆ ಅನಿರೀಕ್ಷಿತ ಆರ್ಥಿಕ ಪರಿಸ್ಥಿತಿಗಳು ಕಾರಣ. ಉದ್ಯಮ ಮತ್ತು ಹೂಡಿಕೆಯಲ್ಲಿ ನಷ್ಟವಾಗಿದೆ ಹೊರತು ನಾವು ವಂಚಿಸಿಲ್ಲ ಎಂದು ದಂಪತಿ ಅರ್ಜಿಯಲ್ಲಿ ತಿಳಿಸಿದ್ದಾರೆ.</p>.ಮಸ್ಕಿ: ಅವ್ಯವಹಾರ– ತಲೇಖಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಸದಸ್ಯತ್ವ ರದ್ದು.ಬಿಗ್ಬಾಸ್ನಲ್ಲಿ ರಕ್ಷಿತಾಳದ್ದು ಬರೀ ನಾಟಕ, ನಾನು ಕೂಡ ಮಂಗಳೂರಿನವನು: ಧ್ರುವಂತ್.ದೋಣಿಯಲ್ಲೇ ಚಹಾ ಅಂಗಡಿ ತೆರೆದ ವೃದ್ಧೆ; ನೆಟ್ಟಿಗರ ಮೆಚ್ಚುಗೆ.ರಾಯಚೂರು ಬಳಿ ಕಾರು ಅಪಘಾತ: ಗಬ್ಬೂರು PSI ಅರುಣ್ಗೆ ಗಂಭೀರ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>