<p>ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಹೊರಡಲು ಸಜ್ಜಾಗಿದ್ದಾರೆ.</p>.<p>ಬೆಂಗಳೂರಿನ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಶನಿವಾರ ಬೆಳಿಗ್ಗೆ ಸ್ನೇಹಿತರೊಟ್ಟಿಗೆ ಶಿವಣ್ಣ ವಿಶೇಷ ಪೂಜೆ ಸಲ್ಲಿಸಿ, ಮಾಲೆ ಧರಿಸಿದರು. ಈ ಸಂದರ್ಭದಲ್ಲಿ ಅವರ ಜತೆಗೆ ಪತ್ನಿ ಗೀತಾ ಇದ್ದರು.</p>.<p>ಹಲವು ವರ್ಷಗಳಿಂದ ಶಿವಣ್ಣ ಶಬರಿಮಲೆ ಯಾತ್ರೆ ನಡೆಸಿಕೊಂಡು ಬಂದಿದ್ದು, ತಮ್ಮ ತಾಯಿ ಪಾರ್ವತಮ್ಮ ರಾಜ್ಕುಮಾರ್ ನಿಧನದ ನಂತರ ಯಾತ್ರೆಯನ್ನು ಕೈಗೊಂಡಿರಲಿಲ್ಲ.</p>.<p>ಚಿತ್ರರಂಗದಲ್ಲಿನ ತಮ್ಮ ಸ್ನೇಹಿತರೊಡಗೂಡಿ ಮಾಲೆಧಾರಣೆ ಮಾಡಿರುವ ಶಿವಣ್ಣ ಈಗ ವ್ರತಾಚರಣೆಯಲ್ಲಿದ್ದು, ಮಾರ್ಚ್ 14ರಂದು ಶಬರಿಮಲೆಗೆ ಯಾತ್ರೆ ಕೈಗೊಳ್ಳಲಿದ್ದಾರೆ. ನಿರ್ದೇಶಕ ರಘುರಾಂ ಸಹ ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ್ದು, ಶಿವಣ್ಣಗೆ ಸಾಥ್ ನೀಡಿದ್ದಾರೆ.</p>.<p>ಡಾ. ರಾಜ್ಕುಮಾರ್ ಕುಟುಂಬದವರು ಅಯ್ಯಪ್ಪ ಸ್ವಾಮಿಯ ಭಕ್ತರಾಗಿದ್ದು, ಡಾ. ರಾಜ್ ಪ್ರತಿ ವರ್ಷವೂ ಮಾಲೆಧರಿಸಿ ಶಬರಿಮಲೆಗೆ ಹೋಗಿಬರುತ್ತಿದ್ದರು. ಈ ಹಿಂದಿನಿಂದಲೂ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಸೇರಿದಂತೆ ಕುಟುಂಬದ ಸದಸ್ಯರು ಶಬರಿಮಲೆ ಯಾತ್ರೆ ನಡೆಸಿಕೊಂಡು ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಹೊರಡಲು ಸಜ್ಜಾಗಿದ್ದಾರೆ.</p>.<p>ಬೆಂಗಳೂರಿನ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಶನಿವಾರ ಬೆಳಿಗ್ಗೆ ಸ್ನೇಹಿತರೊಟ್ಟಿಗೆ ಶಿವಣ್ಣ ವಿಶೇಷ ಪೂಜೆ ಸಲ್ಲಿಸಿ, ಮಾಲೆ ಧರಿಸಿದರು. ಈ ಸಂದರ್ಭದಲ್ಲಿ ಅವರ ಜತೆಗೆ ಪತ್ನಿ ಗೀತಾ ಇದ್ದರು.</p>.<p>ಹಲವು ವರ್ಷಗಳಿಂದ ಶಿವಣ್ಣ ಶಬರಿಮಲೆ ಯಾತ್ರೆ ನಡೆಸಿಕೊಂಡು ಬಂದಿದ್ದು, ತಮ್ಮ ತಾಯಿ ಪಾರ್ವತಮ್ಮ ರಾಜ್ಕುಮಾರ್ ನಿಧನದ ನಂತರ ಯಾತ್ರೆಯನ್ನು ಕೈಗೊಂಡಿರಲಿಲ್ಲ.</p>.<p>ಚಿತ್ರರಂಗದಲ್ಲಿನ ತಮ್ಮ ಸ್ನೇಹಿತರೊಡಗೂಡಿ ಮಾಲೆಧಾರಣೆ ಮಾಡಿರುವ ಶಿವಣ್ಣ ಈಗ ವ್ರತಾಚರಣೆಯಲ್ಲಿದ್ದು, ಮಾರ್ಚ್ 14ರಂದು ಶಬರಿಮಲೆಗೆ ಯಾತ್ರೆ ಕೈಗೊಳ್ಳಲಿದ್ದಾರೆ. ನಿರ್ದೇಶಕ ರಘುರಾಂ ಸಹ ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ್ದು, ಶಿವಣ್ಣಗೆ ಸಾಥ್ ನೀಡಿದ್ದಾರೆ.</p>.<p>ಡಾ. ರಾಜ್ಕುಮಾರ್ ಕುಟುಂಬದವರು ಅಯ್ಯಪ್ಪ ಸ್ವಾಮಿಯ ಭಕ್ತರಾಗಿದ್ದು, ಡಾ. ರಾಜ್ ಪ್ರತಿ ವರ್ಷವೂ ಮಾಲೆಧರಿಸಿ ಶಬರಿಮಲೆಗೆ ಹೋಗಿಬರುತ್ತಿದ್ದರು. ಈ ಹಿಂದಿನಿಂದಲೂ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಸೇರಿದಂತೆ ಕುಟುಂಬದ ಸದಸ್ಯರು ಶಬರಿಮಲೆ ಯಾತ್ರೆ ನಡೆಸಿಕೊಂಡು ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>