‘ಶಿವಾಜಿಯಾಗಿ ರಮೇಶ್ ಅರವಿಂದ್ ಅವರು ಬಣ್ಣ ಹಚ್ಚಲಿದ್ದು, ರಾಧಿಕಾ ನಾರಾಯಣ್, ರಘು ರಾಮನಕೊಪ್ಪ ಮತ್ತು ವಿದ್ಯಾಮೂರ್ತಿ ಭಾಗ-2ರಲ್ಲೂ ಮುಂದುವರಿಯಲಿದ್ದಾರೆ. ಉಳಿದ ತಾರಾಗಣದಲ್ಲಿ ಹೊಸಮುಖಗಳು ಪರಿಚಯಗೊಳ್ಳಲಿದ್ದಾರೆ.ಶಿವಾಜಿ ಸುರತ್ಕಲ್ ಎರಡು ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿತ್ತು. ಆದರೆ ಭಾಗ-2 ಬಹುಕೋನಗಳಿರುವ ಚಿತ್ರಕಥೆ ಹೊಂದಿದ್ದು, ಪತ್ತೆದಾರಿ ಕಥೆಯಾಗಿರುವುದರಿಂದ ಕೊಲೆಗಾರನ ಹುಡುಕಾಟದ ಮಾರ್ಗದಲ್ಲಿ ಚಲಿಸುತ್ತಿರುತ್ತದೆ.ಚಿತ್ರಮಂದಿರ ಭೇಟಿಯ ಸಂದರ್ಭ ಎದುರಾಗಿದ್ದ ಅನೇಕ ಪ್ರಶ್ನೆಗಳಿಗೆ, ವಿಶೇಷವಾಗಿ ಶಿವಾಜಿ ಸುರತ್ಕಲ್ ಎಂಬ ಶೀರ್ಷಿಕೆಗೆ ಈ ಚಿತ್ರದಲ್ಲಿ ಉತ್ತರವಿದೆ’ ಎನ್ನುತ್ತಾರೆಆಕಾಶ್ ಶ್ರೀವತ್ಸ.