ಶಿವಾಜಿಯಾಗಿ ರಮೇಶ್ ಅರವಿಂದ್ ಅವರು ಎರಡನೇ ಭಾಗದಲ್ಲೂ ಬಣ್ಣ ಹಚ್ಚಲಿದ್ದು, ರಾಧಿಕಾ ನಾರಾಯಣ್, ರಘು ರಾಮನಕೊಪ್ಪ ಮತ್ತು ವಿದ್ಯಾಮೂರ್ತಿ ಭಾಗ-2ರಲ್ಲೂ ಮುಂದುವರಿಯಲಿದ್ದಾರೆ. ಚಿತ್ರದಲ್ಲಿ ಡಿಸಿಪಿ ಹುದ್ದೆಯಲ್ಲಿರುವ ಯುವ ಐಪಿಎಸ್ ಅಧಿಕಾರಿ ‘ದೀಪ ಕಾಮತ್’ ಪಾತ್ರದಲ್ಲಿ ಮೇಘನಾ ಗಾಂವ್ಕರ್ ಕಾಣಿಸಿಕೊಳ್ಳಲಿದ್ದಾರೆ. ಮಗಳು ಜಾನಕಿ ಧಾರಾವಾಹಿಯಲ್ಲಿ ನಟಿಸಿದ್ದ ರಾಕೇಶ್ ಮಯ್ಯ, ಬಿಗ್ಬಾಸ್ ಖ್ಯಾತಿಯ ವಿನಾಯಕ ಜೋಷಿ ಅವರೂ ಇದೀಗ ಚಿತ್ರತಂಡ ಸೇರಿಕೊಂಡಿದ್ದು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.