ನಟ ಶಿವರಾಜ್ಕುಮಾರ್ ಅವರು ನಾಯಕನಾಗಿ ನಟಿಸಲಿರುವ ಸಂದೇಶ್ ಪ್ರೊಡಕ್ಷನ್ಸ್ನ ನೂತನ ಚಿತ್ರವನ್ನು ಚಿ.ಗುರುದತ್ ನಿರ್ದೇಶಿಸಲಿದ್ದಾರೆ ಎನ್ನುವ ಮಾಹಿತಿಯನ್ನು ಕೆಲ ತಿಂಗಳ ಹಿಂದಷ್ಟೇ ಚಿತ್ರತಂಡ ನೀಡಿತ್ತು. ಹೊಸ ಸುದ್ದಿ ಏನೆಂದರೆ ಇದೀಗ ಗುರುದತ್ ಅವರ ಬದಲಾಗಿ, ‘ಬೀರ್ ಬಲ್’, ‘ಓಲ್ಡ್ ಮಾಂಕ್’ ಸಿನಿಮಾ ಖ್ಯಾತಿಯ ನಟ ಶ್ರೀನಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರಕ್ಕೆ ‘ಗೋಸ್ಟ್’ ಎನ್ನುವ ಶೀರ್ಷಿಕೆಯನ್ನು ಇಡಲಾಗಿದೆ.