ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಒಕ್ಕೂಟದ ವತಿಯಿಂದ ವೇದ ಸಿನಿಮಾ ಪ್ರಚಾರ ರ್ಯಾಲಿಯನ್ನು ದುರ್ಗದಬೈಲ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಸಂಜೆ ನಾಲ್ಕು ಗಂಟೆಗೆ ಜಮಾಯಿಸಿದ್ದರು. ಸಂಜೆ 6 ಗಂಟೆ ಸುಮಾರಿಗೆ ಬಂದ ಶಿವರಾಜ್ಕುಮಾರ್ ಅಭಿಮಾನಿಗಳ ಸಂಘದ ಉಪಾಧ್ಯಕ್ಷ ಶಿವಾನಂದ ಮುತ್ತಣ್ಣವರ ಶಿವರಾಜ್ಕುಮಾರ್ ಅವರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದಿಲ್ಲ, ಅಪ್ಸರಾ ಚಿತ್ರಮಂದಿರದಲ್ಲಿ ಮಾತನಾಡಲಿದ್ದಾರೆ ಎಂದರು.