<p>ವಿನಯ್ ರಾಜ್ಕುಮಾರ್, ಮೇಘಾ ಶೆಟ್ಟಿ ಜೋಡಿಯಾಗಿ ನಟಿಸಿರುವ ‘ಗ್ರಾಮಾಯಣ’ ಚಿತ್ರದ ‘ಬೆಂಕಿ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಇದರೊಂದಿಗೆ ಬಹಳ ಕಾಲದಿಂದ ಅಪ್ಡೇಟ್ ಇಲ್ಲದೆ ನಿಂತಿದ್ದ ಚಿತ್ರಕ್ಕೆ ಮರುಜೀವ ಸಿಕ್ಕಿದೆ. ದೇವನೂರು ಚಂದ್ರು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. </p><p>ಶಿವರಾಜ್ಕುಮಾರ್ ಹಾಡು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಜತೆಗೆ ಚಿತ್ರತಂಡದೊಂದಿಗೆ ಹಾಡಿಗೆ ಹೆಜ್ಜೆಯನ್ನೂ ಹಾಕಿದರು. ಶಿವರಾಜ್ಕುಮಾರ್ ಹಾಗೂ ಸುಧಾರಾಣಿ ನಟನೆಯಲ್ಲಿ ಮೂಡಿಬಂದಿದ್ದ ‘ಮನ ಮೆಚ್ಚಿದ ಹುಡುಗಿ’ ಸಿನಿಮಾದ ‘ನಿನ್ನಾಣೆ ನಾನು ಬೆಂಕಿಯಲ್ಲಿ ತಪ್ಪು ಕಂಡೆನು’ ಹಾಡನ್ನು ಇಲ್ಲಿ ರಿಮೇಕ್ ಮಾಡಲಾಗಿದೆ. ಈ ಹಾಡನ್ನು ಕಪಿಲ್ ಕಪಿಲನ್, ಐರಾ ಉಡುಪಿ ಹಾಡಿದ್ದಾರೆ. ಚಿ ಉದಯಶಂಕರ್ ಸಾಹಿತ್ಯ, ಉಪೇಂದ್ರ ಕುಮಾರ್ ಮೂಲ ಸಂಗೀತದ ಈ ಗೀತೆಯನ್ನು ಪೂರ್ಣಚಂದ್ರ ತೇಜಸ್ವಿ ಮರು ಸಂಯೋಜಿಸಿದ್ದಾರೆ.</p>.<p>ಲಹರಿ ಫಿಲ್ಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದೆ. ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಚಿತ್ರದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಚಿತ್ರಗ್ರಹಣ, ದೀಪು ಎಸ್. ಕುಮಾರ್ ಸಂಕಲನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿನಯ್ ರಾಜ್ಕುಮಾರ್, ಮೇಘಾ ಶೆಟ್ಟಿ ಜೋಡಿಯಾಗಿ ನಟಿಸಿರುವ ‘ಗ್ರಾಮಾಯಣ’ ಚಿತ್ರದ ‘ಬೆಂಕಿ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಇದರೊಂದಿಗೆ ಬಹಳ ಕಾಲದಿಂದ ಅಪ್ಡೇಟ್ ಇಲ್ಲದೆ ನಿಂತಿದ್ದ ಚಿತ್ರಕ್ಕೆ ಮರುಜೀವ ಸಿಕ್ಕಿದೆ. ದೇವನೂರು ಚಂದ್ರು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. </p><p>ಶಿವರಾಜ್ಕುಮಾರ್ ಹಾಡು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಜತೆಗೆ ಚಿತ್ರತಂಡದೊಂದಿಗೆ ಹಾಡಿಗೆ ಹೆಜ್ಜೆಯನ್ನೂ ಹಾಕಿದರು. ಶಿವರಾಜ್ಕುಮಾರ್ ಹಾಗೂ ಸುಧಾರಾಣಿ ನಟನೆಯಲ್ಲಿ ಮೂಡಿಬಂದಿದ್ದ ‘ಮನ ಮೆಚ್ಚಿದ ಹುಡುಗಿ’ ಸಿನಿಮಾದ ‘ನಿನ್ನಾಣೆ ನಾನು ಬೆಂಕಿಯಲ್ಲಿ ತಪ್ಪು ಕಂಡೆನು’ ಹಾಡನ್ನು ಇಲ್ಲಿ ರಿಮೇಕ್ ಮಾಡಲಾಗಿದೆ. ಈ ಹಾಡನ್ನು ಕಪಿಲ್ ಕಪಿಲನ್, ಐರಾ ಉಡುಪಿ ಹಾಡಿದ್ದಾರೆ. ಚಿ ಉದಯಶಂಕರ್ ಸಾಹಿತ್ಯ, ಉಪೇಂದ್ರ ಕುಮಾರ್ ಮೂಲ ಸಂಗೀತದ ಈ ಗೀತೆಯನ್ನು ಪೂರ್ಣಚಂದ್ರ ತೇಜಸ್ವಿ ಮರು ಸಂಯೋಜಿಸಿದ್ದಾರೆ.</p>.<p>ಲಹರಿ ಫಿಲ್ಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದೆ. ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಚಿತ್ರದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಚಿತ್ರಗ್ರಹಣ, ದೀಪು ಎಸ್. ಕುಮಾರ್ ಸಂಕಲನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>