ಈ ಕುರಿತು ಟ್ವಿಟರ್ನಲ್ಲಿ ವಿಡಿಯೊ ಅಪ್ಲೋಡ್ ಮಾಡಿರುವ ಶಿವರಾಜ್ಕುಮಾರ್, ‘ನನ್ನ ಜನ್ಮದಿನಕ್ಕಿಂತ ನಿಮ್ಮೆಲ್ಲರ ಆರೋಗ್ಯ ನನಗೆ ಮುಖ್ಯ. ದೇವರ ದಯೆಯಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಹಾಗಂತ ನಾವು ಎಚ್ಚರಿಕೆಯಿಂದ ಇರಬೇಕಾದ ಸಮಯ ಇನ್ನೂ ಮುಗಿದಿಲ್ಲ. ಮುಂದೆ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು. ಜುಲೈ 12 ನನ್ನ ಜನ್ಮದಿನ. ಇದು ಎಲ್ಲರಿಗೂ ತಿಳಿದಿದೆ. ಆ ದಿನ ಕೆಲವು ಕಾರಣಗಳಿಂದ ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ದಯವಿಟ್ಟು ಬೇಸರ ಮಾಡಿಕೊಳ್ಳಬೇಡಿ. ನಿಮಗೆ ಎಷ್ಟು ಬೇಸರವಿದೆಯೋ ಅಷ್ಟೇ ಬೇಸರ ನನಗಿದೆ. ನಿಮ್ಮ ಶುಭಹಾರೈಕೆಯನ್ನು ಸಾಮಾಜಿಕ ಜಾಲತಾಣಗಳ ಮುಖಾಂತರವೇ ತಿಳಿಸಿ. ನಿಮ್ಮ ಶುಭಹಾರೈಕೆ, ಪ್ರೋತ್ಸಾಹ, ಪ್ರೀತಿ ನನ್ನ ಮೇಲೆ ಯಾವಗಲೂ ಇರಲಿ ಎಂದು ಬಯಸುತ್ತೇನೆ. ಅತಿ ಮುಖ್ಯವಾದ ವಿಷಯ ಏನೆಂದರೆ ದಯವಿಟ್ಟು ಕೋವಿಡ್ ನಿಯಮಗಳನ್ನು ಪಾಲಿಸಿ. ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಪಾಡಿಕೊಳ್ಳಿ ಹಾಗೂ ಲಸಿಕೆ ಹಾಕಿಸಿಕೊಳ್ಳಿ. ಆದಷ್ಟು ಬೇಗ ಕೊರೊನಾ ಕಡಿಮೆಯಾಗಲಿ. ನಾವೆಲ್ಲರೂ ಜೊತೆಸೇರೋಣ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.