<p>‘ಕವಲುದಾರಿ’, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶಕ ಹೇಮಂತ್ ಎಂ.ರಾವ್ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಶೂಟಿಂಗ್ ಆರಂಭವಾಗಿದೆ. </p>.<p>ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಅದ್ದೂರಿಯಾದ ಸೆಟ್ ಹಾಕಿ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ನಟ ಶಿವರಾಜ್ಕುಮಾರ್ ಹಾಗೂ ಡಾಲಿ ಧನಂಜಯ ಭಾಗಿಯಾಗಿದ್ದಾರೆ. ಆ.23 ಧನಂಜಯ ಅವರ ಜನ್ಮದಿನವಾಗಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಅವರ ಪಾತ್ರದ ಹೊಸ ಫೋಟೊ ಬಿಡುಗಡೆ ಮಾಡಿದೆ. ರೆಟ್ರೋ ಗೆಟಪ್ನಲ್ಲಿ ಧನಂಜಯ ಕಾಣಿಸಿಕೊಂಡಿದ್ದು, ಕೈಯಲ್ಲಿ ಗನ್ ಹಿಡಿದು ಕಾರಿನಲ್ಲಿ ಕನಸು ಕಾಣುತ್ತಾ ಸ್ಟೈಲಿಶ್ ಆಗಿ ಕ್ಯಾಮೆರಾಗೆ ಫೋಸ್ ಕೊಟ್ಟಿದ್ದಾರೆ.</p>.<p>ಧನಂಜಯ ಹಾಗೂ ಶಿವರಾಜ್ಕುಮಾರ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಡಾ.ವೈಶಾಖ್ ಜೆ. ಗೌಡ ಅವರ ‘ವೈಶಾಖ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ ಈ ಸಿನಿಮಾಗಿದೆ. ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕವಲುದಾರಿ’, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶಕ ಹೇಮಂತ್ ಎಂ.ರಾವ್ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಶೂಟಿಂಗ್ ಆರಂಭವಾಗಿದೆ. </p>.<p>ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಅದ್ದೂರಿಯಾದ ಸೆಟ್ ಹಾಕಿ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ನಟ ಶಿವರಾಜ್ಕುಮಾರ್ ಹಾಗೂ ಡಾಲಿ ಧನಂಜಯ ಭಾಗಿಯಾಗಿದ್ದಾರೆ. ಆ.23 ಧನಂಜಯ ಅವರ ಜನ್ಮದಿನವಾಗಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಅವರ ಪಾತ್ರದ ಹೊಸ ಫೋಟೊ ಬಿಡುಗಡೆ ಮಾಡಿದೆ. ರೆಟ್ರೋ ಗೆಟಪ್ನಲ್ಲಿ ಧನಂಜಯ ಕಾಣಿಸಿಕೊಂಡಿದ್ದು, ಕೈಯಲ್ಲಿ ಗನ್ ಹಿಡಿದು ಕಾರಿನಲ್ಲಿ ಕನಸು ಕಾಣುತ್ತಾ ಸ್ಟೈಲಿಶ್ ಆಗಿ ಕ್ಯಾಮೆರಾಗೆ ಫೋಸ್ ಕೊಟ್ಟಿದ್ದಾರೆ.</p>.<p>ಧನಂಜಯ ಹಾಗೂ ಶಿವರಾಜ್ಕುಮಾರ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಡಾ.ವೈಶಾಖ್ ಜೆ. ಗೌಡ ಅವರ ‘ವೈಶಾಖ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ ಈ ಸಿನಿಮಾಗಿದೆ. ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>