ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಡಿ ಟಿ.ಆರ್. ಚಂದ್ರಶೇಖರ್ ನಿರ್ಮಿಸುತ್ತಿರುವ ಇದರ ಶೂಟಿಂಗ್ ಇತ್ತೀಚೆಗೆ ಮುಕ್ತಾಯವಾಯಿತು. ಬೆಂಗಳೂರು, ಚನ್ನಪಟ್ಟಣ, ಶ್ರೀರಂಗಪಟ್ಟಣ, ಮೈಸೂರು, ಮಂಡ್ಯ, ತುಮಕೂರು, ಮಾಗಡಿ, ಮದ್ದೂರಿನ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಮದ್ದೂರಿನ ಬಳಿಯ ತೈಲೂರಿನಲ್ಲಿ ಕೊನೆಯ ದಿನದ ಚಿತ್ರೀಕರಣ ನಡೆಸಿದ ಚಿತ್ರತಂಡ ಅಲ್ಲಿಯೇ ಕುಂಬಳಕಾಯಿ ಒಡೆದಿದೆ. ಚಿತ್ರದ ಡಬ್ಬಿಂಗ್ ಕೂಡ ಮುಕ್ತಾಯ ಹಂತದಲ್ಲಿದೆಯಂತೆ.