<p>ಕಾಮಿಡಿ,ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಕಥಾಹಂದರದ ‘ನೈಟ್ಮೇರ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಚಿತ್ರತಂಡ ಕೈಗೆತ್ತಿಕೊಂಡಿದೆ.</p>.<p>ನವೀನ್ ನಾಯಕ ಮತ್ತು ಕಿತ್ತಾನೆ ಗೋಪಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.ನವೀನ್ ನಾಯಕ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಇವರಿಗೆ ಜೋಡಿಯಾಗಿಅಂಚಲ್ ರಾಜ್ ಅಭಿನಯಿಸಿದ್ದಾರೆ.</p>.<p>ಕಂಟೆಂಟ್ ಪ್ರಧಾನವಾದ ಚಿತ್ರಗಳನ್ನು ಕನ್ನಡ ಸಿನಿಪ್ರಿಯರು ಎಂದಿಗೂ ಕೈಬಿಡುವುದಿಲ್ಲ. ಈ ಚಿತ್ರದಲ್ಲಿ ಒಳ್ಳೆಯ ಕಂಟೆಂಟ್ ಇದೆ. ಹಾಸ್ಯವೂ ಹದವಾಗಿ ಬೆರೆಸಲಾಗಿದೆ. ಪ್ರೇಕ್ಷಕನ ಕುತೂಹಲ ಕೆರಳಿಸುವಂತಹ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಅಂಶಗಳನ್ನೂ ಕಥೆಗೆ ಪೂರಕವಾಗಿ ಸೇರಿಸಿದ್ದೇವೆ. ನಮ್ಮ ಚಿತ್ರ ಸಿನಿಪ್ರಿಯರ ಮನಸು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ನಿರ್ದೇಶಕ ಮತ್ತು ನಾಯಕ ನಟನವೀನ್ ನಾಯಕ.</p>.<p>ಬೆಂಗಳೂರು ಸುತ್ತಮುತ್ತಕಳೆದ ಜನವರಿಯಿಂದಲೇ ಶೂಟಿಂಗ್ ನಡೆಸಲಾಗಿತ್ತು. ಕೊರೊನಾ ಲಾಕ್ಡೌನ್ ಪೂರ್ವದಲ್ಲೇ ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ನಡೆದಿತ್ತು. ಬಾಕಿ ಉಳಿದಿದ್ದ ಸಣ್ಣಪುಟ್ಟ ಭಾಗವನ್ನು ಇತ್ತೀಚೆಗಷ್ಟೇ ಪೂರ್ಣಗೊಳಿಸಲಾಯಿತು ಎನ್ನುತ್ತಾರೆ ಅವರು.</p>.<p>ಸೌನವಿ ಕ್ರಿಯೇಷನ್ಸ್ ಅಡಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆಕೆ.ಆರ್. ಸೌಜನ್ಯ ಬಂಡವಾಳ ಹೂಡಿದ್ದಾರೆ. ಛಾಯಾಗ್ರಹಣ ಹರಿಕೃಷ್ಣ,ನಿರ್ದೇಶನ ಸುಬ್ರಮಣ್ಯ ಆಚಾರ್ಯ, ಸಂಕಲನ ಪವನ್ ಗೌಡ ಅವರದು.</p>.<p>‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಅಪ್ಪಣ್ಣ ರಾಮದುರ್ಗ, ‘ಕಿರಿಕ್ ಪಾರ್ಟಿ’ ಖ್ಯಾತಿಯ ರಾಘು ರಾಮನ ಕೊಪ್ಪ, ಯಶೋಧರ, ಚೇತನ್, ಮಹೇಶ್, ಅಕ್ಷಯ್ ಅವರ ತಾರಾಗಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಮಿಡಿ,ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಕಥಾಹಂದರದ ‘ನೈಟ್ಮೇರ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಚಿತ್ರತಂಡ ಕೈಗೆತ್ತಿಕೊಂಡಿದೆ.</p>.<p>ನವೀನ್ ನಾಯಕ ಮತ್ತು ಕಿತ್ತಾನೆ ಗೋಪಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.ನವೀನ್ ನಾಯಕ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಇವರಿಗೆ ಜೋಡಿಯಾಗಿಅಂಚಲ್ ರಾಜ್ ಅಭಿನಯಿಸಿದ್ದಾರೆ.</p>.<p>ಕಂಟೆಂಟ್ ಪ್ರಧಾನವಾದ ಚಿತ್ರಗಳನ್ನು ಕನ್ನಡ ಸಿನಿಪ್ರಿಯರು ಎಂದಿಗೂ ಕೈಬಿಡುವುದಿಲ್ಲ. ಈ ಚಿತ್ರದಲ್ಲಿ ಒಳ್ಳೆಯ ಕಂಟೆಂಟ್ ಇದೆ. ಹಾಸ್ಯವೂ ಹದವಾಗಿ ಬೆರೆಸಲಾಗಿದೆ. ಪ್ರೇಕ್ಷಕನ ಕುತೂಹಲ ಕೆರಳಿಸುವಂತಹ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಅಂಶಗಳನ್ನೂ ಕಥೆಗೆ ಪೂರಕವಾಗಿ ಸೇರಿಸಿದ್ದೇವೆ. ನಮ್ಮ ಚಿತ್ರ ಸಿನಿಪ್ರಿಯರ ಮನಸು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ನಿರ್ದೇಶಕ ಮತ್ತು ನಾಯಕ ನಟನವೀನ್ ನಾಯಕ.</p>.<p>ಬೆಂಗಳೂರು ಸುತ್ತಮುತ್ತಕಳೆದ ಜನವರಿಯಿಂದಲೇ ಶೂಟಿಂಗ್ ನಡೆಸಲಾಗಿತ್ತು. ಕೊರೊನಾ ಲಾಕ್ಡೌನ್ ಪೂರ್ವದಲ್ಲೇ ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ನಡೆದಿತ್ತು. ಬಾಕಿ ಉಳಿದಿದ್ದ ಸಣ್ಣಪುಟ್ಟ ಭಾಗವನ್ನು ಇತ್ತೀಚೆಗಷ್ಟೇ ಪೂರ್ಣಗೊಳಿಸಲಾಯಿತು ಎನ್ನುತ್ತಾರೆ ಅವರು.</p>.<p>ಸೌನವಿ ಕ್ರಿಯೇಷನ್ಸ್ ಅಡಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆಕೆ.ಆರ್. ಸೌಜನ್ಯ ಬಂಡವಾಳ ಹೂಡಿದ್ದಾರೆ. ಛಾಯಾಗ್ರಹಣ ಹರಿಕೃಷ್ಣ,ನಿರ್ದೇಶನ ಸುಬ್ರಮಣ್ಯ ಆಚಾರ್ಯ, ಸಂಕಲನ ಪವನ್ ಗೌಡ ಅವರದು.</p>.<p>‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಅಪ್ಪಣ್ಣ ರಾಮದುರ್ಗ, ‘ಕಿರಿಕ್ ಪಾರ್ಟಿ’ ಖ್ಯಾತಿಯ ರಾಘು ರಾಮನ ಕೊಪ್ಪ, ಯಶೋಧರ, ಚೇತನ್, ಮಹೇಶ್, ಅಕ್ಷಯ್ ಅವರ ತಾರಾಗಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>