ಕೆಜಿಎಫ್ ಖ್ಯಾತಿಯ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ರೋರಿಂಗ್ ಸ್ಟಾರ್ ಶ್ರೀ ಮುರಳಿ ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ಹೊಂಬಾಳೆ ಫಿಲ್ಸಂ ಸಂಸ್ಥೆ ಈ ಚಿತ್ರಕ್ಕೆ ಹಣ ಹೂಡಿಕೆ ಮಾಡುತ್ತಿದ್ದು ಇದು ಆ ಸಂಸ್ಥೆಯ 8ನೇ ಸಿನಿಮಾವಾಗಿದೆ. ಮುರಳಿ ಹುಟ್ಟುಹಬ್ಬದ ದಿನವಾದ ಇಂದು ಸಿನಿಮಾ ಶೀರ್ಷಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ‘ಬಘೀರ’ ಎಂದು ಹೆಸರಿಸಲಾಗಿದೆ.