‘ಕನ್ನಡ ಸಾಹಿತ್ಯದಲ್ಲಿ ಅಪಾರ ಆಸಕ್ತಿ ಇದ್ದಿದ್ದರಿಂದ ಬಿ.ಎ ಮಾಡಲು ಮೈಸೂರಿನ ಮಹಾರಾಜಾ ಕಾಲೇಜಿಗೆ ಅರ್ಜಿ ಸಲ್ಲಿಸಿದ್ದೆ. ಭೌತಶಾಸ್ತ್ರ, ಗಣಿತ, ರಸಾಯನ ಶಾಸ್ತ್ರದಲ್ಲಿ ಉತ್ತಮ ಅಂಕಗಳು ಇದ್ದಿದ್ದರಿಂದ ಬಿ.ಇ ಮಾಡಲು ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜಿಗೂ ಅರ್ಜಿ ಸಲ್ಲಿಸಿದೆ. ಆದರೆ, ಅದೃಷ್ಟ ಎಂಜಿನಿಯರಿಂಗ್ನತ್ತ ಒಲಿಯಿತು’ ಎಂದು ಹೇಳಿದರು.