ಈ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿರುವುದು ವೇಣು ಶ್ರೀರಾಮ್. ಈ ಚಿತ್ರಕ್ಕೆ ನಾಯಕಿ ಯಾರಾಗಲಿದ್ದಾರೆ ಎಂಬ ಕುತೂಹಲ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿತ್ತು. ಶ್ರುತಿ ಹಾಸನ್, ಇಲಿಯಾನಾ, ಲಾವಣ್ಯಾ ತ್ರಿಪಾಠಿ ಅವರು ಪವನ್ ಕಲ್ಯಾಣ್ ಜೊತೆಗೆ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿತ್ತು. ಕೊನೆಗೆ, ಚಿತ್ರತಂಡ ಶ್ರುತಿ ಹಾಸನ್ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿದೆ ಎಂಬ ಸುದ್ದಿ ಹೊರಬಿದ್ದಿದೆ.