‘ಶರಣ ಶ್ರೇಷ್ಠರಾದ ಸಿದ್ಧಾರೂಢರ ಜೀವನಾಧಾರಿತ ಚಿತ್ರ ನಿರ್ದೇಶನ ಮಾಡಿದ್ದು ನನ್ನ ಪುಣ್ಯ. ಮಂಟೂರಿನ ಗುರುಗಳು ನನ್ನನ್ನ ಕರೆದು ಈ ರೀತಿಯ ಚಿತ್ರ ಮಾಡಿಕೊಬೇಕೆಂದು ಹೇಳಿದರು. ಈ ಸಲುವಾಗಿ ನನ್ನನ್ನು ದೆಹಲಿಗೆ ಕಳುಹಿಸಿ, ಅಲ್ಲಿ ಸ್ವಾಮಿನಾರಾಯಣ ಆಶ್ರಮದಲ್ಲಿ ಗುರುಗಳ ಕುರಿತು ಚಿತ್ರ ಮಾಡಿದ್ದಾರೆ. ನೋಡಿ ಬನ್ನಿ ಎಂದರು. ನೋಡಿ ಬಂದೆ. ಎಲ್ಲರಿಗೂ ಸಾಧುಕೋಕಿಲ, ಇಂತಹ ಚಿತ್ರ ಮಾಡಿದ್ದಾರಾ? ಎಂಬ ಆಶ್ಚರ್ಯ. ನನಗೂ ಮೊದಲು ಹಾಗೆ ಅನಿಸಿತು.ನಮ್ಮ ಚಿತ್ರದಲ್ಲಿ ಸಿದ್ಧಾರೂಢರ ಎಂಟು ವರ್ಷದಿಂದ ನಲವತ್ತೆಂಟು ವರ್ಷಗಳ ನಡುವೆ ನಡೆಯುವ ಮಹಿಮೆಗಳನ್ನು ತೋರಿಸಲಾಗಿದೆ. ಮಂಟೂರು, ಹೈದರಾಬಾದ್, ಕಾಶ್ಮೀರ, ಸಕಲೇಶಪುರ ಹಾಗೂ ಕರ್ನಾಟಕದ ಸುಂದರವಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರೀಕರಣ ನಡೆಯುವಾಗ ನನಗೂ ಕೆಲವು ವಿಶೇಷ ಅನುಭವಗಳಾದವವು. ಇದೇ ನ.9ರಂದು ಮಂಟೂರಿನ ಚಿತ್ರಮಂದಿರದಲ್ಲಿ 55 ನಿಮಿಷಗಳ ಅವಧಿಯ ಈ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು ಸಾಧುಕೋಕಿಲ.