‘ನಾವು ಸಲ್ಮಾನ್ ಖಾನ್ ಅವರ ಒಟ್ಟಾರೆ ಭದ್ರತೆಯನ್ನು ಹೆಚ್ಚಿಸಿದ್ದೇವೆ. ರಾಜಸ್ಥಾನದ ಗ್ಯಾಂಗ್ನಿಂದ ಯಾವುದೇ ಅಹಿತಕರ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಸಲ್ಮಾನ್ ಅವರ ಅಪಾರ್ಟ್ಮೆಂಟ್ ಸುತ್ತ ಪೊಲೀಸರು ಗಸ್ತು ತಿರುಗುತ್ತಿರುತ್ತಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಬಿಷ್ಣೋಯಿ ಸಂಚು ರೂಪಿಸಿದ್ದರು. ಕೃಷ್ಣ ಮೃಗವನ್ನು ಪವಿತ್ರ ಜೀವಿ ಎಂಬುದು ಬಿಷ್ಣೋಯ್ಗಳ ನಂಬಿಕೆಯಾಗಿದೆ. ಸಲ್ಮಾನ್, ಕೃಷ್ಣ ಮೃಗ ಬೇಟೆ ಪ್ರಕರಣದ ಆರೋಪಿಯಾಗಿರುವುದರಿಂದ ಅವರಿಗೆ ಹಲವು ಬಾರಿ ಬೆದರಿಗೆ ಹಾಕಲಾಗಿತ್ತು.