<p>ಲೂಸ್ ಮಾದ ಯೋಗಿ, ರಮ್ಯಾ ಜೋಡಿಯಾಗಿ ನಟಿಸಿದ್ದ ‘ಸಿದ್ಲಿಂಗು’ ಹೊಸರೀತಿಯ ನಿರೂಪಣೆಯಿಂದ ಜನಮನ್ನಣೆ ಗಳಿಸಿತ್ತು. ಆ ಸಿನಿಮಾ ತೆರೆಕಂಡು 12 ವರ್ಷಗಳ ಬಳಿಕ ಸೆಟ್ಟೇರಿದ ‘ಸಿದ್ಲಿಂಗು-2’ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ.</p>.<p>‘ತೋತಾಪುರಿ’ ಬಳಿಕ ನಿರ್ದೇಶಕ ವಿಜಯ್ ಪ್ರಸಾದ್ ‘ಸಿದ್ಲಿಂಗು’ ಸೀಕ್ವೆಲ್ ಕಥೆಯನ್ನು ಕೈಗೆತ್ತಿಕೊಂಡಿದ್ದರು. ‘ಜಮಾಲಿಗುಡ್ಡ’ ಚಿತ್ರದ ನಿರ್ಮಾಪಕ ಶ್ರೀಹರಿ ರೆಡ್ಡಿ ನಿಹಾರಿಕಾ ಫಿಲ್ಮ್ಸ್ ಅಡಿಯಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<p>‘ಸಿದ್ಲಿಂಗು ಹಾಸ್ಯ, ಸಂಬಂಧಗಳು, ಪ್ರೀತಿ, ಭಾವನೆಗಳಿಂದ ಜನರ ಮೆಚ್ಚುಗೆ ಗಳಿಸಿತ್ತು. ಇಲ್ಲಿ ಬರೀ ಮೀನಿಂಗ್ ಇರಲಿದೆ. ನನ್ನ ಹಿಂದಿನ ಸಿನಿಮಾಗಳಂತೆ ಡಬಲ್ ಮೀನಿಂಗ್ ಇರುವುದಿಲ್ಲ. ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಗೊಂಡಿದ್ದು, ಒಂದು ಹಾಡನ್ನು ಜಮ್ಮು–ಕಾಶ್ಮೀರದಲ್ಲಿ ಚಿತ್ರೀಕರಿಸಲಾಗಿದೆ’ ಎಂದಿದ್ದಾರೆ ನಿರ್ದೇಶಕ.</p>.<p>‘ಕಿರಗೂರಿನ ಗಯ್ಯಾಳಿಗಳು’ ಖ್ಯಾತಿಯ ಸೋನುಗೌಡ ನಾಯಕಿ. ಅನೂಪ್ ಸೀಳಿನ್ ಸಂಗೀತ, ಅರಸು ಅಂತಾರೆ ಸಾಹಿತ್ಯ ಚಿತ್ರಕ್ಕಿದೆ. ಪದ್ಮಜಾ ರಾಜ್, ಆಂಟೋನಿ ಕಮಲ್, ಮಹಾಂತೇಶ್ ಸೇರಿದಂತೆ ದೊಡ್ಡ ತಾರಾಗಣವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲೂಸ್ ಮಾದ ಯೋಗಿ, ರಮ್ಯಾ ಜೋಡಿಯಾಗಿ ನಟಿಸಿದ್ದ ‘ಸಿದ್ಲಿಂಗು’ ಹೊಸರೀತಿಯ ನಿರೂಪಣೆಯಿಂದ ಜನಮನ್ನಣೆ ಗಳಿಸಿತ್ತು. ಆ ಸಿನಿಮಾ ತೆರೆಕಂಡು 12 ವರ್ಷಗಳ ಬಳಿಕ ಸೆಟ್ಟೇರಿದ ‘ಸಿದ್ಲಿಂಗು-2’ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ.</p>.<p>‘ತೋತಾಪುರಿ’ ಬಳಿಕ ನಿರ್ದೇಶಕ ವಿಜಯ್ ಪ್ರಸಾದ್ ‘ಸಿದ್ಲಿಂಗು’ ಸೀಕ್ವೆಲ್ ಕಥೆಯನ್ನು ಕೈಗೆತ್ತಿಕೊಂಡಿದ್ದರು. ‘ಜಮಾಲಿಗುಡ್ಡ’ ಚಿತ್ರದ ನಿರ್ಮಾಪಕ ಶ್ರೀಹರಿ ರೆಡ್ಡಿ ನಿಹಾರಿಕಾ ಫಿಲ್ಮ್ಸ್ ಅಡಿಯಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<p>‘ಸಿದ್ಲಿಂಗು ಹಾಸ್ಯ, ಸಂಬಂಧಗಳು, ಪ್ರೀತಿ, ಭಾವನೆಗಳಿಂದ ಜನರ ಮೆಚ್ಚುಗೆ ಗಳಿಸಿತ್ತು. ಇಲ್ಲಿ ಬರೀ ಮೀನಿಂಗ್ ಇರಲಿದೆ. ನನ್ನ ಹಿಂದಿನ ಸಿನಿಮಾಗಳಂತೆ ಡಬಲ್ ಮೀನಿಂಗ್ ಇರುವುದಿಲ್ಲ. ಮೈಸೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಗೊಂಡಿದ್ದು, ಒಂದು ಹಾಡನ್ನು ಜಮ್ಮು–ಕಾಶ್ಮೀರದಲ್ಲಿ ಚಿತ್ರೀಕರಿಸಲಾಗಿದೆ’ ಎಂದಿದ್ದಾರೆ ನಿರ್ದೇಶಕ.</p>.<p>‘ಕಿರಗೂರಿನ ಗಯ್ಯಾಳಿಗಳು’ ಖ್ಯಾತಿಯ ಸೋನುಗೌಡ ನಾಯಕಿ. ಅನೂಪ್ ಸೀಳಿನ್ ಸಂಗೀತ, ಅರಸು ಅಂತಾರೆ ಸಾಹಿತ್ಯ ಚಿತ್ರಕ್ಕಿದೆ. ಪದ್ಮಜಾ ರಾಜ್, ಆಂಟೋನಿ ಕಮಲ್, ಮಹಾಂತೇಶ್ ಸೇರಿದಂತೆ ದೊಡ್ಡ ತಾರಾಗಣವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>