ಬೆಂಗಳೂರು: ದಕ್ಷಿಣ ಭಾರತದ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಶನಿವಾರ ಬೆಂಗಳೂರಿನಲ್ಲಿ ನಡೆದಿದ್ದು ಅಲ್ಲು ಅರ್ಜುನ್ ಅಭಿನಯದ, ಸುಕುಮಾರ್ ನಿರ್ದೇಶನದ ‘ಪುಷ್ಪ ದಿ ರೈಸ್’(ತೆಲುಗು) ಅತ್ಯುತ್ತಮ ಚಿತ್ರ ಪ್ರಶಸ್ತಿ ಬಾಚಿಕೊಂಡಿದೆ. ಇದೇ ಚಿತ್ರದ ಅಭಿನಯಕ್ಕಾಗಿ ನಟ ಅಲ್ಲು ಅರ್ಜುನ್ ಅವರು ಅತ್ಯುತ್ತಮ ನಟ, ನಿರ್ದೇಶಕ ಸುಕುಮಾರ್ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ ಯುವರತ್ನ ಚಿತ್ರಕ್ಕಾಗಿ ಮರಣೋತ್ತರವಾಗಿ ಉತ್ತಮ ನಾಯಕ ನಟ ಪ್ರಶಸ್ತಿ ನೀಡಿ ಗೌರವಿಸಲಾಗಿದೆ