ಶಾಸಕನ ಮಗಳಾಗಿ ನಿವೀಕ್ಷಾನಾಯ್ಡು, ಕಂಪೆನಿ ಕಾರ್ಯದರ್ಶಿಯಾಗಿ ಸುರಕ್ಷಿತಾ ಶೆಟ್ಟಿ ನಾಯಕಿಯರು. ತಾರಾಗಣದಲ್ಲಿ ಬ್ಯಾಂಕ್ ಜನಾರ್ದನ್, ರೇಖಾದಾಸ್, ರಾಂಪುರೋಹಿತ್, ಅರುಣ್ದೇವಸ್ಯ, ಜ್ಯೋತಿ ಮುರೂರು, ದಯಾನಂದ್ ನೀನಾಸಂ, ಶ್ರೀವಿಷ್ಣು, ಉಮಾಶಂಕರ್ ಮುಂತಾದವರು ನಟಿಸಿದ್ದಾರೆ. ಗೋವಾ, ಮಡಿಕೇರಿ, ಸಕಲೇಶಪುರ, ಬಾಗಲಕೋಟೆ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಐದು ಹಾಡುಗಳಿಗೆ ಸಾಹಿತ್ಯ ಮತ್ತು ಸಂಗೀತವನ್ನು ಒದಗಿಸಿರುವುದು ಕಾರ್ತಿಕ್ ವೆಂಕಟೇಶ್. ಗಣೇಶ್ ರಾಜನ್ ಛಾಯಾಗ್ರಹಣ, ಅರವಿಂದ್ ಜೆ.ಪಿ ಸಂಕಲನ, ಅಶೋಕ್ ಸಾಹಸ, ಸೂರಿ - ಜೆ.ಪಿ.ಆರಾಧ್ಯ ನೃತ್ಯ ನಿರ್ವಹಿಸಿದ್ದಾರೆ.