<p>ಮೆಗಾಸ್ಟಾರ್ ಚಿರಂಜೀವಿ ನಟನೆಯ, ರಾಮ್ ಚರಣ್ ತೇಜ ನಿರ್ಮಾಣದ ತೆಲುಗಿನ ಬಹು ನಿರೀಕ್ಷಿತ ಚಿತ್ರ ಸೈರಾ ನರಸಿಂಹ ರೆಡ್ಡಿ ಚಿತ್ರದ ಚಿತ್ರೀಕರಣ ಮುಗಿದಿದೆ.</p>.<p>ಈ ಚಿತ್ರವನ್ನು ರಾಮ್ ಚರಣ್ ತಮ್ಮ ಹೋಂ ಬ್ಯಾನರ್ ಕೋನಿಡೆಲಾ ಸಂಸ್ಥೆಯ ಕಡೆಯಿಂದ ನಿರ್ಮಾಣ ಮಾಡುತ್ತಿದ್ದಾರೆ.</p>.<p>ಈ ಬಗ್ಗೆ ಟ್ವಿಟರ್ ಮಾಹಿತಿ ಹಂಚಿಕೊಂಡ ಛಾಯಾಗ್ರಾಹಕ ರತ್ನವೇಲು ‘ಸೈರಾ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ. ಈ ಚಿತ್ರಕ್ಕಾಗಿ ಶ್ರಮವಹಿಸಿ ಕೆಲಸ ಮಾಡಿದ ಹಾಗೂ ಸಹಕಾರ ನೀಡಿದ ಎಲ್ಲಾ ಚಿತ್ರತಂಡದ ಸದಸ್ಯರಿಗೆ ಧನ್ಯವಾದಗಳು. ಈ ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದಿದ್ದಾರೆ.</p>.<p>ಈ ಚಿತ್ರವು ಬ್ರಿಟಿಷ್ ಆಡಳಿತದ ವಿರುದ್ಧ ದಂಗೆ ಎದ್ದ ನಾಯಕರಲ್ಲಿ ಒಬ್ಬರಾದ ರಾಯಲಸೀಮೆಯ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹ ರೆಡ್ಡಿ ಅವರ ಜೀವನ ಕಥೆಯನ್ನು ಆಧರಿಸಿದ ಚಿತ್ರವಾಗಿದೆ.</p>.<p>1857ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ದಂಗೆ ಎದ್ದ ಹೋರಾಟಗಾರರಲ್ಲಿ ಇವರು ಒಬ್ಬರು. 1847ರಲ್ಲಿ ಇವರನ್ನು ಸೆರೆಹಿಡಿದು ಸಾರ್ವಜನಿಕವಾಗಿ ನೇಣಿಗೇರಿಸಲಾಯಿತು.</p>.<p>ಸುರೇಂದರ್ ರೆಡ್ಡಿ ನಿರ್ದೇಶನದ ಈ ಸಿನಿಮಾವನ್ನು ₹ 200 ಕೋಟಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ನಯನತಾರಾ, ವಿಜಯ್ ಸೇತುಪತಿ, ಸುದೀಪ್ ಹಾಗೂ ಜಗಪತಿ ಬಾಬು ಸೇರಿದಂತೆ ಬಾಲಿವುಡ್, ಕಾಲಿವುಡ್, ಟಾಲಿವುಡ್ ಹಾಗೂ ಸ್ಯಾಂಡಲ್ವುಡ್ನ ಖ್ಯಾತ ನಟರು ಸಿನಿಮಾದಲ್ಲಿನಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೆಗಾಸ್ಟಾರ್ ಚಿರಂಜೀವಿ ನಟನೆಯ, ರಾಮ್ ಚರಣ್ ತೇಜ ನಿರ್ಮಾಣದ ತೆಲುಗಿನ ಬಹು ನಿರೀಕ್ಷಿತ ಚಿತ್ರ ಸೈರಾ ನರಸಿಂಹ ರೆಡ್ಡಿ ಚಿತ್ರದ ಚಿತ್ರೀಕರಣ ಮುಗಿದಿದೆ.</p>.<p>ಈ ಚಿತ್ರವನ್ನು ರಾಮ್ ಚರಣ್ ತಮ್ಮ ಹೋಂ ಬ್ಯಾನರ್ ಕೋನಿಡೆಲಾ ಸಂಸ್ಥೆಯ ಕಡೆಯಿಂದ ನಿರ್ಮಾಣ ಮಾಡುತ್ತಿದ್ದಾರೆ.</p>.<p>ಈ ಬಗ್ಗೆ ಟ್ವಿಟರ್ ಮಾಹಿತಿ ಹಂಚಿಕೊಂಡ ಛಾಯಾಗ್ರಾಹಕ ರತ್ನವೇಲು ‘ಸೈರಾ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ. ಈ ಚಿತ್ರಕ್ಕಾಗಿ ಶ್ರಮವಹಿಸಿ ಕೆಲಸ ಮಾಡಿದ ಹಾಗೂ ಸಹಕಾರ ನೀಡಿದ ಎಲ್ಲಾ ಚಿತ್ರತಂಡದ ಸದಸ್ಯರಿಗೆ ಧನ್ಯವಾದಗಳು. ಈ ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದಿದ್ದಾರೆ.</p>.<p>ಈ ಚಿತ್ರವು ಬ್ರಿಟಿಷ್ ಆಡಳಿತದ ವಿರುದ್ಧ ದಂಗೆ ಎದ್ದ ನಾಯಕರಲ್ಲಿ ಒಬ್ಬರಾದ ರಾಯಲಸೀಮೆಯ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹ ರೆಡ್ಡಿ ಅವರ ಜೀವನ ಕಥೆಯನ್ನು ಆಧರಿಸಿದ ಚಿತ್ರವಾಗಿದೆ.</p>.<p>1857ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ದಂಗೆ ಎದ್ದ ಹೋರಾಟಗಾರರಲ್ಲಿ ಇವರು ಒಬ್ಬರು. 1847ರಲ್ಲಿ ಇವರನ್ನು ಸೆರೆಹಿಡಿದು ಸಾರ್ವಜನಿಕವಾಗಿ ನೇಣಿಗೇರಿಸಲಾಯಿತು.</p>.<p>ಸುರೇಂದರ್ ರೆಡ್ಡಿ ನಿರ್ದೇಶನದ ಈ ಸಿನಿಮಾವನ್ನು ₹ 200 ಕೋಟಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ನಯನತಾರಾ, ವಿಜಯ್ ಸೇತುಪತಿ, ಸುದೀಪ್ ಹಾಗೂ ಜಗಪತಿ ಬಾಬು ಸೇರಿದಂತೆ ಬಾಲಿವುಡ್, ಕಾಲಿವುಡ್, ಟಾಲಿವುಡ್ ಹಾಗೂ ಸ್ಯಾಂಡಲ್ವುಡ್ನ ಖ್ಯಾತ ನಟರು ಸಿನಿಮಾದಲ್ಲಿನಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>