ಹುಟ್ಟುಸಾವಿನ ನಡುವೆ ಏನು ಬೇಕಾದರೂ ಆಗಬಹುದು. ನಮ್ಮ ವಿರುದ್ಧ ಸುಳ್ಳು ಪ್ರಕರಣಗಳು ದಾಖಲಾಗಬಹುದು. ನಾವು ಎಲ್ಲದಕ್ಕೂ ಸಿದ್ಧವಿದ್ದೇವೆ. ಅಧಿಕಾರ ಸೇರಿದಂತೆ ಯಾವುದೂ ಶಾಶ್ವತ ಅಲ್ಲ. ಸೇಡಿನ ರಾಜಕಾರಣ ಸರಿಯಲ್ಲ. ನ್ಯಾಯಾಂಗಕ್ಕೆ ಗೌರವ ನೀಡುತ್ತೇವೆ. ಆದರೆ, ಸುಳ್ಳು ಪ್ರಕರಣಗಳಿಂದ ನನ್ನನ್ನು ಹೆದರಿಸುತ್ತೇನೆ ಎಂಬುದು ಭ್ರಮೆ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.