ಅದರ ಬಗ್ಗೆ ಸ್ಪಷ್ಟನೆ ನೀಡಿರುವ ಸೋನಾಕ್ಷಿ ಸಿನ್ಹಾ, 'ನನ್ನ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿರುವುದಾಗಿ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಆ ಬಗ್ಗೆ ಅಧಿಕೃತ ಮೂಲಗಳಿಂದ ಪರಿಶೀಲಿಸದೆಯೇ ವರದಿಯಾಗುತ್ತಿದೆ. ದುಷ್ಟ ವ್ಯಕ್ತಿಯೊಬ್ಬ ನನಗೆ ಕಿರುಕುಳ ನೀಡಲು ಹೀಗೆಲ್ಲ ಮಾಡಿದ್ದಾರೆ, ಇದೊಂದು ಅಪ್ಪಟ ಕಾಲ್ಪನಿಕ ಕಥೆಯಾಗಿದೆ. ಈ ಸುಳ್ಳು ಸುದ್ದಿಯನ್ನು ಪ್ರಕಟಿಸಬಾರದೆಂದು ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು ಹಾಗೂ ಸುದ್ದಿ ವರದಿಗಾರರಲ್ಲಿ ಕೋರುತ್ತೇನೆ' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.