ಭಾವನಾತ್ಮಕ ಮತ್ತು ಮಾಸ್ ಎಲಿಮೆಂಟ್ ಕಥಾಹಂದರದ ಈ ಸಿನಿಮಾ ಜೈಲಿನ ಬ್ಯಾಕ್ಡ್ರಾಪ್ನಲ್ಲಿ ನಡೆಯಲಿದೆ. ವಿನೋದ್ ಪ್ರಭಾಕರ್ ಈ ಹಿಂದೆ ನಿರ್ವಹಿಸಿದ್ದ ಪಾತ್ರಗಳಿಗಿಂತ ಭಿನ್ನವಾಗಿ ಕಾಣುತ್ತಾರೆ ಎಂದಿದೆ ಚಿತ್ರತಂಡ. ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್ನಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಶ್ರುತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಬಾಲಕೃಷ್ಣ ತೋಟ ಛಾಯಾಗ್ರಹಣ, ಪ್ರದ್ಯೋಥನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.