ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸುತ್ತಿರುವ ‘ಸಾರಿ ಕರ್ಮ ರಿಟರ್ನ್ಸ್’ ಚಿತ್ರ ಸೂಪರ್ ಹೀರೋ ಪರಿಕಲ್ಪನೆಯನ್ನು ಆಧರಿಸಿದೆಯಂತೆ. ಚಿತ್ರದ ಲಿರಿಕಲ್ ಹಾಡು ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಂದರ್ಭ ನಿರ್ದೇಶಕ ಬ್ರಹ್ಮ ಮಾಹಿತಿ ನೀಡಿದರು.
‘ನಾನು ವಿ.ಎಫ್.ಎಕ್ಸ್ ತಂತ್ರಜ್ಞ. ಈ ಹಿಂದೆ ‘ಸಿದ್ದಿಸೀರೆ’ ಚಿತ್ರ ನಿರ್ದೇಶಿಸಿದ್ದೆ. ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಇದುಮೋಷನ್ ಕ್ಯಾಪ್ಚರ್ ಎಂಬ ವಿಶೇಷ ತಂತ್ರಜ್ಞಾನ ಬಳಸಿರುವ ಮೊದಲ ಸೂಪರ್ ಹೀರೊ ಕಾನ್ಸೆಪ್ಟ್ನ ಕನ್ನಡ ಚಿತ್ರ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ’ ಎಂದರು ಬ್ರಹ್ಮ.
ನಾನು ಹೊಸತೆನಿಸಿದ ಪಾತ್ರಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾ ಬಂದಿದ್ದೀನಿ. ಕಲಾವಿದರು ಸ್ವಲ್ಪ ರಿಸ್ಕ್ ಆದರೂ ಪರವಾಗಿಲ್ಲ, ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಬೇಕು ಎಂಬುದು ನನ್ನ ಅನಿಸಿಕೆ. ನನಗೆ ಮೊದಲಿನಿಂದಲೂ ಸೂಪರ್ ಹೀರೊ ಅಂದರೆ ಇಷ್ಟ. ಈಗ ಅದೇ ಪಾತ್ರ ನನಗೆ ಸಿಕ್ಕಿರುವುದು ಖುಷಿಯಾಗಿದೆ’ ಎಂದರು ರಾಗಿಣಿ.
ಅರ್ಜುನ್ ಶರ್ಮ ಚಿತ್ರದ ನಾಯಕ.ನವೀನ್ ಕುಮಾರ್ ಈ ಚಿತ್ರದ ನಿರ್ಮಾಪಕ. ಜೈ ಕೃಪಾಲಾನಿ ಹಾಗೂ ಜೇನ್ ಜಾರ್ಜ್ ಸಹ ನಿರ್ಮಾಪಕರು. ಅಫ್ಜಲ್ ಕಾರ್ಯಕಾರಿ ನಿರ್ಮಾಪಕ.ರಾಜು ಎಮ್ಮಿಗನೂರು ಸಂಗೀತ. ರಾಜೀವ್ ಛಾಯಾಗ್ರಹಣ ಈ ಚಿತ್ರಕ್ಕಿದೆ.