ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ: ಪುತ್ರ ಚರಣ್‌ ಮಾಹಿತಿ

Last Updated 20 ಆಗಸ್ಟ್ 2020, 12:50 IST
ಅಕ್ಷರ ಗಾತ್ರ

‘ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ‌ ಇಂದು ಕೂಡ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನಿನ್ನೆಯಂತೆಯೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ. ವೈದ್ಯರು ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ’ ಎಂದು ಅವರ ಪುತ್ರ ಎಸ್.ಪಿ. ಚರಣ್‌ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಅಪ್ಪ ಚೇತರಿಸಿಕೊಂಡು ಮನೆಗೆ ಮರಳಲಿ ಎಂದು ನಟ, ನಟಿಯರು ಸೇರಿದಂತೆ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿರುವುದು ಖುಷಿ ತಂದಿದೆ. ನಮ್ಮ ಕುಟುಂಬದ ಮೇಲೆ ನೀವು ತೋರುತ್ತಿರುವ ಪ್ರೀತಿಗೆ ಬೆಲೆ ಕಟ್ಟಲಾಗದು. ಇದಕ್ಕಾಗಿ ನಮ್ಮ ಕುಟುಂಬ ನಿಮಗೆ ಆಭಾರಿಯಾಗಿದೆ ಎಂದು ಭಾವುಕರಾಗಿ ಹೇಳಿದ್ದಾರೆ.

‘ನಿಮ್ಮೆಲ್ಲರ ಪ್ರಾರ್ಥನೆ ದೇವರಿಗೆ ಮುಟ್ಟಲಿದೆ. ಅದೇ ಅಪ್ಪನಿಗೆ ಶ್ರೀರಕ್ಷೆಯಾಗಲಿದೆ’ ಎಂದಿದ್ದಾರೆ.

ಕೋವಿಡ್‌ –19 ದೃಢಪಟ್ಟ ಹಿನ್ನೆಲೆಯಲ್ಲಿ ಎಸ್‌ಪಿಬಿ ಅವರನ್ನು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಐಸಿಯುನಲ್ಲಿ ವೆಂಟಿಲೇಟರ್‌ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT