‘ಎಲ್ಲರಿಗೂ ನಮಸ್ಕಾರ. ನಿನ್ನೆ ಅಪ್ಪನ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಹಾಗಾಗಿ ವೆಂಟಿಲೇಟರ್ ಅಳವಡಿಸಲಾಗಿತ್ತು. ಬೆಳಿಗ್ಗೆ ಸಾಕಷ್ಟು ಮೊಬೈಲ್ ಕರೆಗಳು ಬಂದಿದ್ದವು. ಆದರೆ, ಉತ್ತರಿಸಲು ಸಾಧ್ಯವಾಗಿರಲಿಲ್ಲ. ಅಪ್ಪನ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಕ್ರಿಟಿಕಲ್ ಆಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ಅವರ ಶ್ವಾಸಕೋಶ ನಿನ್ನೆಗಿಂತಲೂ ಇಂದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಪ್ಪ ಗುಣಮುಖರಾಗುತ್ತಾರೆ ಎಂಬ ನಂಬಿಕೆ ಇದೆ. ಆದರೆ, ಅದಕ್ಕೆ ಸಾಕಷ್ಟು ಸಮಯ ಬೇಕು. ಇದು ಒಂದೆರಡು ದಿನಗಳಲ್ಲಿ ಆಗುವುದಿಲ್ಲ. ನಿಧಾನವಾಗಿ ಅವರು ಚೇತರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನಮಗಿದೆ. ನಿಮ್ಮೆಲ್ಲರ ಪ್ರಾರ್ಥನೆ ಅವರ ಆರೋಗ್ಯಕ್ಕೆ ಶ್ರೀರಕ್ಷೆಯಾಗಲಿದೆ’ ಎಂದು ತಿಳಿಸಿದ್ದಾರೆ.