<p>ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಹೊಸ ಪ್ರಾಜೆಕ್ಟ್ ಸೆಟ್ಟೇರಿದ್ದು, ಚಿತ್ರೀಕರಣ ನಡೆಯುತ್ತಿದೆ. ಇದೀಗ ನಟ ನೆನಪಿರಲಿ ಪ್ರೇಮ್ ಸೆಟ್ ಪ್ರವೇಶಿಸಿದ್ದು, ಸಿನಿಮಾದಲ್ಲಿ ವಿಶೇಷ ಪಾತ್ರವೊಂದನ್ನು ನಿಭಾಯಿಸುತ್ತಿದ್ದಾರೆ. </p><p>ಡಿ. ಮಹಾಂತೇಶ್ ಹಂದ್ರಾಳ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾದಲ್ಲಿ ಪತ್ರಕರ್ತನಾಗಿ ನಿರಂಜನ್ ಬಣ್ಣ ಹಚ್ಚಿದ್ದಾರೆ. ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಮಹಾಂತೇಶ್ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ‘ಲವ್ಲಿ ಸ್ಟಾರ್’ಗೆ ವಿಶೇಷ ಪಾತ್ರವೊಂದನ್ನು ಬರೆದಿರುವ ಮಹಾಂತೇಶ್, ಹಿಂದೆಂದೂ ಕಾಣದ ಲುಕ್ನಲ್ಲಿ ಪ್ರೇಮ್ ಅವರನ್ನು ತೆರೆ ಮೇಲೆ ತರಲಿದ್ದಾರೆ. ಚಿತ್ರದ ನಾಯಕಿಯಾಗಿ ರಚನಾ ಇಂದರ್ ಬಣ್ಣಹಚ್ಚಿದ್ದಾರೆ. </p><p>ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್’ ಚಿತ್ರವನ್ನು ಡಾ.ಗರಿಮಾ ಅವಿನಾಶ್ ವಸಿಷ್ಠ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಚಿತ್ರಗ್ರಹಣ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಮಧು ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಹೊಸ ಪ್ರಾಜೆಕ್ಟ್ ಸೆಟ್ಟೇರಿದ್ದು, ಚಿತ್ರೀಕರಣ ನಡೆಯುತ್ತಿದೆ. ಇದೀಗ ನಟ ನೆನಪಿರಲಿ ಪ್ರೇಮ್ ಸೆಟ್ ಪ್ರವೇಶಿಸಿದ್ದು, ಸಿನಿಮಾದಲ್ಲಿ ವಿಶೇಷ ಪಾತ್ರವೊಂದನ್ನು ನಿಭಾಯಿಸುತ್ತಿದ್ದಾರೆ. </p><p>ಡಿ. ಮಹಾಂತೇಶ್ ಹಂದ್ರಾಳ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾದಲ್ಲಿ ಪತ್ರಕರ್ತನಾಗಿ ನಿರಂಜನ್ ಬಣ್ಣ ಹಚ್ಚಿದ್ದಾರೆ. ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಮಹಾಂತೇಶ್ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ‘ಲವ್ಲಿ ಸ್ಟಾರ್’ಗೆ ವಿಶೇಷ ಪಾತ್ರವೊಂದನ್ನು ಬರೆದಿರುವ ಮಹಾಂತೇಶ್, ಹಿಂದೆಂದೂ ಕಾಣದ ಲುಕ್ನಲ್ಲಿ ಪ್ರೇಮ್ ಅವರನ್ನು ತೆರೆ ಮೇಲೆ ತರಲಿದ್ದಾರೆ. ಚಿತ್ರದ ನಾಯಕಿಯಾಗಿ ರಚನಾ ಇಂದರ್ ಬಣ್ಣಹಚ್ಚಿದ್ದಾರೆ. </p><p>ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್’ ಚಿತ್ರವನ್ನು ಡಾ.ಗರಿಮಾ ಅವಿನಾಶ್ ವಸಿಷ್ಠ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಚಿತ್ರಗ್ರಹಣ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಮಧು ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>