<p>ವಿಜಯ್ ರಾಘವೇಂದ್ರ ನಟನೆಯ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರ ಬಿಡುಗಡೆಯಾಗಿದೆ. ಅಣ್ಣನ ಚಿತ್ರವನ್ನು ವೀಕ್ಷಿಸಿದ ನಟ ಶ್ರೀಮುರುಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>ಈ ಚಿತ್ರದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಶ್ರೀಮುರುಳಿ, ‘ಎಲ್ಲರೂ ನೋಡಲೇಬೇಕಾದ ಚಿತ್ರವಿದು. ಈ ಚಿತ್ರದಲ್ಲಿ ನನ್ನ ಅಣ್ಣ ಅದ್ಭುತವಾಗಿ ನಟಿಸಿದ್ದಾರೆ. ಈ ಸಿನಿಮಾದ ಪ್ರತಿಯೊಂದು ಕ್ಷಣವು ಚೆನ್ನಾಗಿ ಮೂಡಿ ಬಂದಿದೆ ಎಂದು ಹೇಳಿಕೊಂಡಿದ್ದಾರೆ . </p>.<p>ಈ ಚಿತ್ರದಲ್ಲಿ ನಿರ್ದೇಶನ, ಕಥೆ, ಸಂಗೀತ, ನಟನೆ, ಛಾಯಾಗ್ರಹಣ ಅಚ್ಚುಕಟ್ಟಾಗಿದೆ. ನನ್ನ ಅಣ್ಣನ ಸಿನಿಮಾ ಎಂದು ಈ ಚಿತ್ರವನ್ನು ಹೊಗಳುತ್ತಿಲ್ಲ. ನಿಜವಾಗಿಯೂ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರ ಚೆನ್ನಾಗಿದೆ. ನನಗೆ ಇಷ್ಟರ ಮಟ್ಟಿಗೆ ಸಿನಿಮಾ ಇಷ್ಟವಾಗುವುದು ಬಹಳ ಅಪರೂಪ. ಈ ಸಿನಿಮಾವನ್ನು ಎಲ್ಲರೂ ಸೇರಿ ಉಳಿಸಿಕೊಳ್ಳೋಣ.. ಬೆಳೆಸೋಣ' ಎಂದು ಬರೆದುಕೊಂಡಿದ್ದಾರೆ. </p><p>ದೇವಿಪ್ರಸಾದ್ ಶೆಟ್ಟಿ ಅವರು ಈ ಚಿತ್ರವನ್ನುನಿರ್ದೇಶಿಸಿದ್ದು, ಸಾತ್ವಿಕ್ ಹೆಬ್ಬಾರ್ ಅವರು ನಿರ್ಮಾಣ ಮಾಡಿದ್ದಾರೆ. </p><p>ವಿಜಯ ರಾಘವೇಂದ್ರ, ಗೋಪಾಲಕೃಷ್ಣ ದೇಶಪಾಂಡೆ, ಉಷಾ ಭಂಡಾರಿ ಸೇರಿ ಅನೇಕರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯ್ ರಾಘವೇಂದ್ರ ನಟನೆಯ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರ ಬಿಡುಗಡೆಯಾಗಿದೆ. ಅಣ್ಣನ ಚಿತ್ರವನ್ನು ವೀಕ್ಷಿಸಿದ ನಟ ಶ್ರೀಮುರುಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>ಈ ಚಿತ್ರದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಶ್ರೀಮುರುಳಿ, ‘ಎಲ್ಲರೂ ನೋಡಲೇಬೇಕಾದ ಚಿತ್ರವಿದು. ಈ ಚಿತ್ರದಲ್ಲಿ ನನ್ನ ಅಣ್ಣ ಅದ್ಭುತವಾಗಿ ನಟಿಸಿದ್ದಾರೆ. ಈ ಸಿನಿಮಾದ ಪ್ರತಿಯೊಂದು ಕ್ಷಣವು ಚೆನ್ನಾಗಿ ಮೂಡಿ ಬಂದಿದೆ ಎಂದು ಹೇಳಿಕೊಂಡಿದ್ದಾರೆ . </p>.<p>ಈ ಚಿತ್ರದಲ್ಲಿ ನಿರ್ದೇಶನ, ಕಥೆ, ಸಂಗೀತ, ನಟನೆ, ಛಾಯಾಗ್ರಹಣ ಅಚ್ಚುಕಟ್ಟಾಗಿದೆ. ನನ್ನ ಅಣ್ಣನ ಸಿನಿಮಾ ಎಂದು ಈ ಚಿತ್ರವನ್ನು ಹೊಗಳುತ್ತಿಲ್ಲ. ನಿಜವಾಗಿಯೂ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರ ಚೆನ್ನಾಗಿದೆ. ನನಗೆ ಇಷ್ಟರ ಮಟ್ಟಿಗೆ ಸಿನಿಮಾ ಇಷ್ಟವಾಗುವುದು ಬಹಳ ಅಪರೂಪ. ಈ ಸಿನಿಮಾವನ್ನು ಎಲ್ಲರೂ ಸೇರಿ ಉಳಿಸಿಕೊಳ್ಳೋಣ.. ಬೆಳೆಸೋಣ' ಎಂದು ಬರೆದುಕೊಂಡಿದ್ದಾರೆ. </p><p>ದೇವಿಪ್ರಸಾದ್ ಶೆಟ್ಟಿ ಅವರು ಈ ಚಿತ್ರವನ್ನುನಿರ್ದೇಶಿಸಿದ್ದು, ಸಾತ್ವಿಕ್ ಹೆಬ್ಬಾರ್ ಅವರು ನಿರ್ಮಾಣ ಮಾಡಿದ್ದಾರೆ. </p><p>ವಿಜಯ ರಾಘವೇಂದ್ರ, ಗೋಪಾಲಕೃಷ್ಣ ದೇಶಪಾಂಡೆ, ಉಷಾ ಭಂಡಾರಿ ಸೇರಿ ಅನೇಕರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>