ನಾಗಶೇಖರ್ ನಿರ್ದೇಶನದ ಈ ಚಿತ್ರವನ್ನು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ನಿರ್ಮಾಣ ಮಾಡುತ್ತಿದ್ದಾರೆ. ನಾಗಶೇಖರ್ ಈ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದಿದ್ದು ಚಿತ್ರಕಥೆಯನ್ನು ನಾಗಶೇಖರ್ ಹಾಗೂ ಪ್ರೀತಂಗುಬ್ಬಿ ಬರೆದಿದ್ದಾರೆ. ಚಂದನ್ ಗೌಡ ಎರಡನೇ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಟಿಸಿದ್ದು, ದತ್ತಣ್ಣ, ಸಾಧುಕೋಕಿಲ, ಅಚ್ಯುತ್ ರಾವ್, ಸಾತ್ವಿಕ್(ಕಾರ್ಪೊರೇಟರ್), ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ.