<p>‘ಬಘೀರ’ ನಂತರ ನಟ ಶ್ರೀಮುರಳಿ ಯಾವ ಸಿನಿಮಾ ಮಾಡುತ್ತಾರೆಂಬ ಕುತೂಹಲವಿತ್ತು. ಇದೀಗ ಅದಕ್ಕೆ ತೆರೆ ಬಿದ್ದಿದ್ದು ಐತಿಹಾಸಿಕ ಚಿತ್ರವೊಂದರಲ್ಲಿ ಅವರು ಬಣ್ಣ ಹಚ್ಚಲಿದ್ದಾರೆ. 500 ವರ್ಷಗಳ ಹಿಂದಿನ ಕಥೆಗೆ ಪುನೀತ್ ರುದ್ರನಾಗ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. </p>.<p>ಪುನೀತ್ ರುದ್ರನಾಗ್ ಈಗಾಗಲೇ ನಟನಾಗಿ ಗುರುತಿಸಿಕೊಂಡಿದ್ದಾರೆ. ‘ಕೆಜಿಫ್ ಚಾಪ್ಟರ್ 1’, ‘ಎಕ್ಕ’, ‘ವೀರ ಚಂದ್ರಹಾಸ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಶ್ರೀಮುರುಳಿ ಸ್ನೇಹಿತನಾಗಿರುವ ಪುನೀತ್ಗಿದು ನಿರ್ದೇಶಕನಾಗಿ ಚೊಚ್ಚಲ ಸಿನಿಮಾ. ಸುರಮ್ ಮೂವೀಸ್ ಮೂಲಕ ಜಯರಾಮ್ ದೇವಸಮುದ್ರ ಬೃಹತ್ ಬಜೆಟ್ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. </p>.<p>‘ಐತಿಹಾಸಿಕ ಕಥೆ ಹೊಂದಿರುವ ಸಾಹಸಮಯ ಚಿತ್ರ. ಇತಿಹಾಸದ ಗತವೈಭವ ಸಾರುವ ಕಥೆ. ಈಗಾಗಲೇ ಈ ಕಥೆಯ ವಿಚಾರವಾಗಿ ಬಹಳಷ್ಟು ಕೆಲಸಗಳು ನಡೆಯುತ್ತಿದ್ದು, ಚಿತ್ರ ಪ್ರೀಪ್ರೊಡಕ್ಷನ್ ಹಂತದಲ್ಲಿದೆ. ಹಲವು ಕಾಲಘಟ್ಟಗಳಲ್ಲಿ ಕಥೆ ಸಾಗಲಿದೆ. ನವೆಂಬರ್ನಲ್ಲಿ ಚಿತ್ರ ಸೆಟ್ಟೇರುವ ನಿರೀಕ್ಷೆಯಿದೆ’ ಎಂದು ನಿರ್ದೇಶಕ ತಿಳಿಸಿದ್ದಾರೆ. </p>.<p>ಮೈಸೂರಿನ ಸಂಕೇತ್ ಈ ಚಿತ್ರಕ್ಕೆ ಛಾಯಾಚಿತ್ರಗ್ರಾಹಕರಾಗಿ ಕೆಲಸ ಮಾಡಲಿದ್ದು, ವಿಜಯ್ ರಾಜ್ ಸಂಕಲನ, ಅಮರ್ ಕಲಾ ನಿರ್ದೇಶನವಿದೆ. ಸಂಗೀತ ನಿರ್ದೇಶಕರು ಇನ್ನಷ್ಟೇ ಆಯ್ಕೆಯಾಗಬೇಕಿದೆ ಎಂದಿದೆ ಚಿತ್ರತಂಡ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಬಘೀರ’ ನಂತರ ನಟ ಶ್ರೀಮುರಳಿ ಯಾವ ಸಿನಿಮಾ ಮಾಡುತ್ತಾರೆಂಬ ಕುತೂಹಲವಿತ್ತು. ಇದೀಗ ಅದಕ್ಕೆ ತೆರೆ ಬಿದ್ದಿದ್ದು ಐತಿಹಾಸಿಕ ಚಿತ್ರವೊಂದರಲ್ಲಿ ಅವರು ಬಣ್ಣ ಹಚ್ಚಲಿದ್ದಾರೆ. 500 ವರ್ಷಗಳ ಹಿಂದಿನ ಕಥೆಗೆ ಪುನೀತ್ ರುದ್ರನಾಗ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. </p>.<p>ಪುನೀತ್ ರುದ್ರನಾಗ್ ಈಗಾಗಲೇ ನಟನಾಗಿ ಗುರುತಿಸಿಕೊಂಡಿದ್ದಾರೆ. ‘ಕೆಜಿಫ್ ಚಾಪ್ಟರ್ 1’, ‘ಎಕ್ಕ’, ‘ವೀರ ಚಂದ್ರಹಾಸ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಶ್ರೀಮುರುಳಿ ಸ್ನೇಹಿತನಾಗಿರುವ ಪುನೀತ್ಗಿದು ನಿರ್ದೇಶಕನಾಗಿ ಚೊಚ್ಚಲ ಸಿನಿಮಾ. ಸುರಮ್ ಮೂವೀಸ್ ಮೂಲಕ ಜಯರಾಮ್ ದೇವಸಮುದ್ರ ಬೃಹತ್ ಬಜೆಟ್ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. </p>.<p>‘ಐತಿಹಾಸಿಕ ಕಥೆ ಹೊಂದಿರುವ ಸಾಹಸಮಯ ಚಿತ್ರ. ಇತಿಹಾಸದ ಗತವೈಭವ ಸಾರುವ ಕಥೆ. ಈಗಾಗಲೇ ಈ ಕಥೆಯ ವಿಚಾರವಾಗಿ ಬಹಳಷ್ಟು ಕೆಲಸಗಳು ನಡೆಯುತ್ತಿದ್ದು, ಚಿತ್ರ ಪ್ರೀಪ್ರೊಡಕ್ಷನ್ ಹಂತದಲ್ಲಿದೆ. ಹಲವು ಕಾಲಘಟ್ಟಗಳಲ್ಲಿ ಕಥೆ ಸಾಗಲಿದೆ. ನವೆಂಬರ್ನಲ್ಲಿ ಚಿತ್ರ ಸೆಟ್ಟೇರುವ ನಿರೀಕ್ಷೆಯಿದೆ’ ಎಂದು ನಿರ್ದೇಶಕ ತಿಳಿಸಿದ್ದಾರೆ. </p>.<p>ಮೈಸೂರಿನ ಸಂಕೇತ್ ಈ ಚಿತ್ರಕ್ಕೆ ಛಾಯಾಚಿತ್ರಗ್ರಾಹಕರಾಗಿ ಕೆಲಸ ಮಾಡಲಿದ್ದು, ವಿಜಯ್ ರಾಜ್ ಸಂಕಲನ, ಅಮರ್ ಕಲಾ ನಿರ್ದೇಶನವಿದೆ. ಸಂಗೀತ ನಿರ್ದೇಶಕರು ಇನ್ನಷ್ಟೇ ಆಯ್ಕೆಯಾಗಬೇಕಿದೆ ಎಂದಿದೆ ಚಿತ್ರತಂಡ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>