<p>ಈ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ ಗೀತಪ್ರಿಯ ಸುರೇಶ್ಕುಮಾರ್ ಇದೀಗ ‘ಅಪರಿಚಿತೆ’ ಎಂಬ ಪ್ರಾಜೆಕ್ಟ್ ಘೋಷಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿತು.</p>.<p>ಸಿನಿಮಾ ಕುರಿತು ಮಾತನಾಡಿದ ಗೀತಪ್ರಿಯ, ‘ಸಾಮಾಜಿಕ ಸಂದೇಶ ಇರುವಂತಹ ಸಿನಿಮಾಗಳಲ್ಲಿ ನಟಿಸಲು ನನಗೆ ಇಷ್ಟ. ಹಿಂದಿನ ಸಿನಿಮಾದಂತೆ ಇದೂ ಸಾಮಾಜಿಕ ಸಂದೇಶವಿರುವ ಸಿನಿಮಾ. ಚಿತ್ರೀಕರಣ ಆರಂಭವಾಗಿದ್ದು, ಇದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ನಾನು ಶಿಕ್ಷಕಿಯ ಪಾತ್ರ ಮಾಡುತ್ತಿದ್ದೇನೆ’ ಎಂದರು.</p>.<p>ಚಿತ್ರಕ್ಕೆ ವಿಶ್ವನಾಥ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿಂಧು ಲೋಕನಾಥ್, ಆರ್.ಜೆ.ನಿಖಿತಾ, ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಪುತ್ರ ರೋಹಿತ್ ಪ್ರಮುಖ ಪಾತ್ರದಲ್ಲಿದ್ದಾರೆ. ಥ್ರಿಲ್ಲರ್ ಜಾನರ್ನಲ್ಲಿ ಈ ಸಿನಿಮಾವಿದೆ. ಅಕ್ಟೋಬರ್ನಲ್ಲಿ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಅಮರ ಫಿಲಂಸ್ ಬ್ಯಾನರ್ ಮೂಲಕ ಗೀತಪ್ರಿಯ ಅವರ ಪತಿ ಸುರೇಶ್ಕುಮಾರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. </p>.<p>‘ಕೋವಿಡ್ ಬಳಿಕ ನಾನು ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಸಮಾಜಕ್ಕೆ ಉತ್ತಮ ಸಂದೇಶ ಈ ಸಿನಿಮಾದಲ್ಲಿದೆ. ಮುಖ್ಯವಾಗಿ 40 ವರ್ಷದ ನಂತರ ನಾನು, ನನ್ನ ಮಗ ಒಂದೇ ಚಿತ್ರದಲ್ಲಿ ನಟಿಸುತ್ತಿದ್ದೇವೆ’ ಎಂದರು ಶ್ರೀನಾಥ್. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ ಗೀತಪ್ರಿಯ ಸುರೇಶ್ಕುಮಾರ್ ಇದೀಗ ‘ಅಪರಿಚಿತೆ’ ಎಂಬ ಪ್ರಾಜೆಕ್ಟ್ ಘೋಷಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣಗೊಂಡಿತು.</p>.<p>ಸಿನಿಮಾ ಕುರಿತು ಮಾತನಾಡಿದ ಗೀತಪ್ರಿಯ, ‘ಸಾಮಾಜಿಕ ಸಂದೇಶ ಇರುವಂತಹ ಸಿನಿಮಾಗಳಲ್ಲಿ ನಟಿಸಲು ನನಗೆ ಇಷ್ಟ. ಹಿಂದಿನ ಸಿನಿಮಾದಂತೆ ಇದೂ ಸಾಮಾಜಿಕ ಸಂದೇಶವಿರುವ ಸಿನಿಮಾ. ಚಿತ್ರೀಕರಣ ಆರಂಭವಾಗಿದ್ದು, ಇದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ನಾನು ಶಿಕ್ಷಕಿಯ ಪಾತ್ರ ಮಾಡುತ್ತಿದ್ದೇನೆ’ ಎಂದರು.</p>.<p>ಚಿತ್ರಕ್ಕೆ ವಿಶ್ವನಾಥ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿಂಧು ಲೋಕನಾಥ್, ಆರ್.ಜೆ.ನಿಖಿತಾ, ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಪುತ್ರ ರೋಹಿತ್ ಪ್ರಮುಖ ಪಾತ್ರದಲ್ಲಿದ್ದಾರೆ. ಥ್ರಿಲ್ಲರ್ ಜಾನರ್ನಲ್ಲಿ ಈ ಸಿನಿಮಾವಿದೆ. ಅಕ್ಟೋಬರ್ನಲ್ಲಿ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಅಮರ ಫಿಲಂಸ್ ಬ್ಯಾನರ್ ಮೂಲಕ ಗೀತಪ್ರಿಯ ಅವರ ಪತಿ ಸುರೇಶ್ಕುಮಾರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. </p>.<p>‘ಕೋವಿಡ್ ಬಳಿಕ ನಾನು ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಸಮಾಜಕ್ಕೆ ಉತ್ತಮ ಸಂದೇಶ ಈ ಸಿನಿಮಾದಲ್ಲಿದೆ. ಮುಖ್ಯವಾಗಿ 40 ವರ್ಷದ ನಂತರ ನಾನು, ನನ್ನ ಮಗ ಒಂದೇ ಚಿತ್ರದಲ್ಲಿ ನಟಿಸುತ್ತಿದ್ದೇವೆ’ ಎಂದರು ಶ್ರೀನಾಥ್. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>