ಹಾಸ್ಯ ಕತೆ ಹೊಂದಿರುವ ಚಿತ್ರ ‘ಶ್ರೀರಂಗ’ದ ಚಿತ್ರೀಕರಣ ಮುಕ್ತಾಯವಾಗಿದೆ. ಹಿನ್ನೆಲೆ ಸಂಗೀತ ಅಳವಡಿಕೆ ನಡೆಯುತ್ತಿದೆ. ಬೆಂಗಳೂರು ಸುತ್ತಮುತ್ತ 21 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಕೊರೋನಾ ಅಲೆ ಕಡಿಮೆಯಾದರೆ ಆಗಸ್ಟ್ ವೇಳೆಗೆ ಚಿತ್ರವು ತೆರೆ ಕಾಣಲಿದೆ ಎಂದು ಚಿತ್ರತಂಡ ಹೇಳಿದೆ.
ರತು ಕ್ರಿಯೇಷನ್ಸ್ ಲಾಂಛನದಲ್ಲಿ ಸುಮಾ ಅವರು ಚಿತ್ರ ನಿರ್ಮಿಸುತ್ತಿದ್ದಾರೆ. ವೆಂಕಟ್ ಭಾರದ್ವಾಜ್ ನಿರ್ದೇಶಿಸುತ್ತಿದ್ದಾರೆ. ಸಮೀರ್ ಕುಲಕರ್ಣಿ ಸಂಗೀತ ನೀಡುತ್ತಿದ್ದಾರೆ. ಒಂದು ಪರಿಚಯಾತ್ಮಕ ಹಾಡನ್ನು ವಿರಾಜ್ ಕನ್ನಡಿಗ ಬರೆದು ಹಾಡಿದ್ದಾರೆ. ಮಿಥುನ್ ಛಾಯಾಗ್ರಹಣ ಹಾಗೂ ಚಂದನ್ ಅವರ ಸಂಕಲನವಿದೆ. ಶಂಕರ್ ರಾಮನ್ ಸಂಭಾಷಣೆ ಬರೆದಿದ್ದಾರೆ.
ಗುರುರಾಜ ಹೊಸಕೋಟೆ, ಯಮುನಾ ಶ್ರೀನಿಧಿ, ಶಿನವ, ರಚನಾ ರೈ, ಮಾಸ್ಟರ್ ಚಿರಾಯು ಚಕ್ರವರ್ತಿ, ರೂಪ ರಾಯಪ್ಪ(ಕೆಜಿಎಫ್), ವಂದನಾ ಶೆಟ್ಟಿ, ಸಾಗರ್ ಜಯರಾಂ, ಸೂಪರ್ ದೇವು, ರಾಮಕೃಷ್ಣ, ಜ್ಯೋತಿ ಮೂರುರ್, ವೆಂಕಟ್ ಭಾರದ್ವಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.