<p><strong>ಬೆಂಗಳೂರು: </strong>ಚಿತ್ರಮಂದಿರ ಶೇ.50ರಷ್ಟು ಮಿತಿ ಆದೇಶವನ್ನು ರಾಜ್ಯ ಸರ್ಕಾರ ಸದ್ಯಕ್ಕೆ ಹಿಂತೆಗೆದುಕೊಂಡಿದೆ.</p>.<p>ಏಪ್ರಿಲ್ 7ರವರೆಗೆ ಶೇ 100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಲಾಗಿದೆ. ಏ.7ರ ನಂತರ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಇರುತ್ತದೆ ಎಂದು ಸರ್ಕಾರ ಮರು ಆದೇಶ ಹೊರಡಿಸಿದೆ. </p>.<p>ಕೋವಿಡ್–19 ನಿಯಂತ್ರಣಕ್ಕಾಗಿ ರಾಜ್ಯದ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವುದಾಗಿ ಶುಕ್ರವಾರ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿತ್ತು.</p>.<p>ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.</p>.<p>‘ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆಯನ್ನು ಶೇ 50 ನಿರ್ಬಂಧಿಸಿರುವುದನ್ನು ರದ್ದುಗೊಳಿಸಿ. ಪೂರ್ಣ ಪ್ರಮಾಣದಲ್ಲಿ ಚಿತ್ರಮಂದಿರಗಳ ಭರ್ತಿಗೆ ಅವಕಾಶ ನೀಡಿ’ ಎಂದು ನಟ ಪುನೀತ್ ರಾಜ್ಕುಮಾರ್ ಅವರು ಸರ್ಕಾರಕ್ಕೆ ಆಗ್ರಹಿಸಿದ್ದರು.</p>.<p>‘ಜನರು ಕುಟುಂಬ ಸಮೇತರಾಗಿ ಬಂದು ಚಿತ್ರಗಳನ್ನು ನೋಡುತ್ತಿದ್ದಾರೆ. ಎಲ್ಲರೂ ತಮ್ಮ ತಮ್ಮ ಸುರಕ್ಷತೆಯನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಿನಿಮಾ ಇಷ್ಟೊಂದು ಚೆನ್ನಾಗಿ ನಡೆಯುತ್ತಿರುವಾಗ ಈ ನಿರ್ಬಂಧ ಸೂಕ್ತವಲ್ಲ’ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/state-government-to-release-new-guidelines-for-controlling-covid19-coronavirus-health-department-818725.html" target="_blank">ಕೋವಿಡ್ ಹೆಚ್ಚಳ: ಶಾಲೆ, ಚಿತ್ರಮಂದಿರ, ಜಿಮ್ಗಳ ಮೇಲೆ ಹೇರಿದ ನಿರ್ಬಂಧಗಳೇನು?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಿತ್ರಮಂದಿರ ಶೇ.50ರಷ್ಟು ಮಿತಿ ಆದೇಶವನ್ನು ರಾಜ್ಯ ಸರ್ಕಾರ ಸದ್ಯಕ್ಕೆ ಹಿಂತೆಗೆದುಕೊಂಡಿದೆ.</p>.<p>ಏಪ್ರಿಲ್ 7ರವರೆಗೆ ಶೇ 100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಲಾಗಿದೆ. ಏ.7ರ ನಂತರ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಇರುತ್ತದೆ ಎಂದು ಸರ್ಕಾರ ಮರು ಆದೇಶ ಹೊರಡಿಸಿದೆ. </p>.<p>ಕೋವಿಡ್–19 ನಿಯಂತ್ರಣಕ್ಕಾಗಿ ರಾಜ್ಯದ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವುದಾಗಿ ಶುಕ್ರವಾರ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿತ್ತು.</p>.<p>ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.</p>.<p>‘ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆಯನ್ನು ಶೇ 50 ನಿರ್ಬಂಧಿಸಿರುವುದನ್ನು ರದ್ದುಗೊಳಿಸಿ. ಪೂರ್ಣ ಪ್ರಮಾಣದಲ್ಲಿ ಚಿತ್ರಮಂದಿರಗಳ ಭರ್ತಿಗೆ ಅವಕಾಶ ನೀಡಿ’ ಎಂದು ನಟ ಪುನೀತ್ ರಾಜ್ಕುಮಾರ್ ಅವರು ಸರ್ಕಾರಕ್ಕೆ ಆಗ್ರಹಿಸಿದ್ದರು.</p>.<p>‘ಜನರು ಕುಟುಂಬ ಸಮೇತರಾಗಿ ಬಂದು ಚಿತ್ರಗಳನ್ನು ನೋಡುತ್ತಿದ್ದಾರೆ. ಎಲ್ಲರೂ ತಮ್ಮ ತಮ್ಮ ಸುರಕ್ಷತೆಯನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಿನಿಮಾ ಇಷ್ಟೊಂದು ಚೆನ್ನಾಗಿ ನಡೆಯುತ್ತಿರುವಾಗ ಈ ನಿರ್ಬಂಧ ಸೂಕ್ತವಲ್ಲ’ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/state-government-to-release-new-guidelines-for-controlling-covid19-coronavirus-health-department-818725.html" target="_blank">ಕೋವಿಡ್ ಹೆಚ್ಚಳ: ಶಾಲೆ, ಚಿತ್ರಮಂದಿರ, ಜಿಮ್ಗಳ ಮೇಲೆ ಹೇರಿದ ನಿರ್ಬಂಧಗಳೇನು?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>