ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದ ಚಿತ್ರೀಕರಣ ತಮಿಳುನಾಡಿನ ಮಹಾಬಲಿಪುರಂನಲ್ಲಿ ಹಾಕಿರುವ ಸೆಟ್ನಲ್ಲಿ ನಡೆಯುತ್ತಿದೆ. ಡಿಸೆಂಬರ್ನಲ್ಲಿ ಚಿತ್ರದ ಚಿತ್ರೀಕರಣ ಏಕಾಏಕಿ ಸ್ಥಗಿತಗೊಂಡಿತ್ತು. ಚೆನ್ನೈನಲ್ಲಿ ಸುರಿದಿದ್ದ ಭಾರಿ ಮಳೆಯಿಂದಾಗಿ ಚಿತ್ರದ ಸೆಟ್ಗಳಿಗೆ ಹಾನಿಯಾಗಿತ್ತು. ಈ ಕಾರಣದಿಂದ ಜನವರಿಗೆ ಚಿತ್ರೀಕರಣವನ್ನು ಮುಂದೂಡಲಾಗಿತ್ತು. ಈ ನಡುವೆ ಕನ್ನಡ ಚಲನಚಿತ್ರ ಕಪ್(ಕೆಸಿಸಿ) ಕ್ರಿಕೆಟ್ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದ ಸುದೀಪ್, ಇದೀಗ ಸೆಟ್ಗೆ ಮರಳಿದ್ದಾರೆ. ಶೂಟಿಂಗ್ ಪುನರಾರಂಭವಾಗಿದ್ದು, ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿದೆ ಎಂಬ ಮಾಹಿತಿ ದೊರಕಿದೆ. ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಫಹಾದ್ ಫಾಸಿಲ್ ನಟಿಸುತ್ತಿರುವ ಮಾತು ಕೇಳಿಬರುತ್ತಿದ್ದು, ಚಿತ್ರತಂಡದಿಂದ ಅಧಿಕೃತವಾದ ಮಾಹಿತಿ ಇಲ್ಲ.