ಬೆಂಗಳೂರು: ಸಹೋದ್ಯೋಗಿ ಪತ್ರಕರ್ತನ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ರವಿ ಬೆಳಗೆರೆ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ಬೆಳಗೆರೆಗೆ ನೀಡಿರುವ ಜಾಮೀನು ರದ್ದು ಗೊಳಿಸುವಂತೆ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ಬಳಿಕ ಬೆಳಗೆರೆಗೆ ನೋಟಿಸ್ ಜಾರಿಗೊಳಿಸಲು ಕೋರ್ಟ್ ಆದೇಶಿಸಿದೆ.
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪವನ್ನು ಬೆಳಗೆರೆ ಎದುರಿಸುತ್ತಿದ್ದಾರೆ.
‘ಬೆಳಗೆರೆ ಹಳೆಯ ವೈದ್ಯಕೀಯ ದಾಖಲೆಗಳನ್ನು ನೀಡಿ ಜಾಮೀನು ಪಡೆದಿದ್ದಾರೆ. ಕೋರ್ಟ್ಗೆ ಸುಳ್ಳು ದಾಖಲೆಗಳನ್ನು ಒದಗಿಸಿದ್ದಾರೆ. ಆದ್ದರಿಂದ ಅಧೀನ ನ್ಯಾಯಾಲಯ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸಬೇಕು’ ಎಂದು ಸಿಸಿಬಿ ಪೊಲೀಸರು ಮನವಿ ಸಲ್ಲಿಸಿದ್ದರು.