ತಮ್ಮ ಪುತ್ರ ಸಾಗರ್ ಪುರಾಣಿಕ್ ಸೆನ್ಸಾರ್ ಮಂಡಳಿಯ ಸಲಹಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವ ಬಗ್ಗೆ ಸ್ಪಷ್ಟಪಡಿಸಿರುವ ಅವರು, ‘ಸಾಗರ್ ನಾಟಕ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ತನ್ನದೇ ಆದ ನೆಲೆಯಲ್ಲಿ ಬೆಳೆದು ಬದುಕು ಕಟ್ಟಿಕೊಂಡಿದ್ದಾರೆ. ಅವರ ಹೆಸರು ಸೇರಿಸುವಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ನನ್ನ ಪುತ್ರ ಎಂಬ ಕಾರಣಕ್ಕೆ ಅವನ ನಿರ್ಮಾಣದ ‘ಡೊಳ್ಳು’ ಚಿತ್ರವನ್ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಾ ವಿಭಾಗದಿಂದ ಹೊರಗಿಟ್ಟಿದ್ದೇನೆ. ಹಾಗಾಗಿ ಸಾಗರ್ ತಮ್ಮ ಪುತ್ರ ಎನ್ನುವುದನ್ನು ಬಿಟ್ಟರೆ ಸೆನ್ಸಾರ್ ಮಂಡಳಿಯ ನೆಮಕಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದಿದ್ದಾರೆ.