<p>ಪ್ರೇಮಕಥೆಯನ್ನು ಹೊಂದಿರುವ ‘ಸೂರ್ಯ’ ಚಿತ್ರದ ‘ಕೆಂಪಾನ ಗಲ್ಲದ ಹುಡುಗಿ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಾಗರ್ ದಾಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. </p><p>‘ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ ಎಂಬುದೇ ಚಿತ್ರಕಥೆ. ಇದೊಂದು ಮಾಸ್ ಲವ್ಸ್ಟೋರಿ. ಸೂರ್ಯ ನಾಯಕನ ಹೆಸರು. ಬೆಂಗಳೂರು ಸುತ್ತಮುತ್ತ ಹಾಗೂ ಪುಣೆಯಲ್ಲಿ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ಒಂದು ಉತ್ತರ ಕರ್ನಾಟಕ ಶೈಲಿಯ ಹಾಡು ಮಾಡಬೇಕು ಅಂದುಕೊಂಡಾಗ ಈ ಹಾಡು ಸಿದ್ಧವಾಯಿತು. ಜೂನ್ ಅಥವಾ ಜುಲೈನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’ ಎಂದರು.</p><p>ಈ ಗೀತೆಗೆ ರವೀಂದ್ರ ಸೊರಗಾವಿ, ಸ್ಫೂರ್ತಿ ಧ್ವನಿಯಾಗಿದ್ದಾರೆ. ಶ್ರೀಶ ಸಾಸ್ತಾ ಸಂಗೀತ ನಿರ್ದೇಶನವಿದೆ. ಐದು ಹಾಡುಗಳಿದ್ದು, ಬಹದ್ದೂರ್ ಚೇತನ್, ಯೋಗರಾಜ್ ಭಟ್ ಮುಂತಾದವರ ಸಾಹಿತ್ಯವಿದೆ. ಮನುರಾಜ್ ಛಾಯಾಚಿತ್ರಗ್ರಹಣವಿದೆ. ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. </p><p>ಯುವನಟ ಪ್ರಶಾಂತ್ಗೆ ಹರ್ಷಿತಾ ಜೋಡಿಯಾಗಿದ್ದಾರೆ. ಟಿ.ಎಸ್. ನಾಗಾಭರಣ, ಬಲ ರಾಜವಾಡಿ, ಭಜರಂಗಿ ಪ್ರಸನ್ನ, ಆರ್ಮುಗಂ ರವಿಶಂಕರ್, ಶ್ರುತಿ, ಪ್ರಮೋದ್ ಶೆಟ್ಟಿ ಮುಂತಾದವರು ತಾರಾಗಣದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರೇಮಕಥೆಯನ್ನು ಹೊಂದಿರುವ ‘ಸೂರ್ಯ’ ಚಿತ್ರದ ‘ಕೆಂಪಾನ ಗಲ್ಲದ ಹುಡುಗಿ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಾಗರ್ ದಾಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. </p><p>‘ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ ಎಂಬುದೇ ಚಿತ್ರಕಥೆ. ಇದೊಂದು ಮಾಸ್ ಲವ್ಸ್ಟೋರಿ. ಸೂರ್ಯ ನಾಯಕನ ಹೆಸರು. ಬೆಂಗಳೂರು ಸುತ್ತಮುತ್ತ ಹಾಗೂ ಪುಣೆಯಲ್ಲಿ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ಒಂದು ಉತ್ತರ ಕರ್ನಾಟಕ ಶೈಲಿಯ ಹಾಡು ಮಾಡಬೇಕು ಅಂದುಕೊಂಡಾಗ ಈ ಹಾಡು ಸಿದ್ಧವಾಯಿತು. ಜೂನ್ ಅಥವಾ ಜುಲೈನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’ ಎಂದರು.</p><p>ಈ ಗೀತೆಗೆ ರವೀಂದ್ರ ಸೊರಗಾವಿ, ಸ್ಫೂರ್ತಿ ಧ್ವನಿಯಾಗಿದ್ದಾರೆ. ಶ್ರೀಶ ಸಾಸ್ತಾ ಸಂಗೀತ ನಿರ್ದೇಶನವಿದೆ. ಐದು ಹಾಡುಗಳಿದ್ದು, ಬಹದ್ದೂರ್ ಚೇತನ್, ಯೋಗರಾಜ್ ಭಟ್ ಮುಂತಾದವರ ಸಾಹಿತ್ಯವಿದೆ. ಮನುರಾಜ್ ಛಾಯಾಚಿತ್ರಗ್ರಹಣವಿದೆ. ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. </p><p>ಯುವನಟ ಪ್ರಶಾಂತ್ಗೆ ಹರ್ಷಿತಾ ಜೋಡಿಯಾಗಿದ್ದಾರೆ. ಟಿ.ಎಸ್. ನಾಗಾಭರಣ, ಬಲ ರಾಜವಾಡಿ, ಭಜರಂಗಿ ಪ್ರಸನ್ನ, ಆರ್ಮುಗಂ ರವಿಶಂಕರ್, ಶ್ರುತಿ, ಪ್ರಮೋದ್ ಶೆಟ್ಟಿ ಮುಂತಾದವರು ತಾರಾಗಣದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>