<p><strong>ಮುಂಬೈ</strong>: ಡ್ರಗ್ಸ್ ಜಾಲದೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.</p>.<p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ದೀಪೇಶ್ ಸಾವಂತ್ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರಿಗೂ ಜಾಮೀನು ದೊರೆತಿದೆ. ಆದರೆ, ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.</p>.<p>ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರಿಯಾ ಪರ ವಕೀಲ ಸತೀಶ್ ಮನೇಶಿಂದೆ, 'ಬಾಂಬೆ ಹೈಕೋರ್ಟ್ ನೀಡಿರುವ ಆದೇಶದಿಂದ ನಾವು ಸಂತೋಷಗೊಂಡಿದ್ದೇವೆ. ಸತ್ಯ ಮತ್ತು ನ್ಯಾಯವು ಮೇಲುಗೈ ಸಾಧಿಸಿದೆ' ಎಂದು ಹೇಳಿದ್ದಾರೆ.</p>.<p>'ರಿಯಾಳ ಬಂಧನ ಕಾನೂನಿನ ವ್ಯಾಪ್ತಿಯನ್ನು ಮೀರಿತ್ತು. ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಎನ್ಸಿಬಿ ಸಂಸ್ಥೆಗಳು ರಿಯಾ ವಿರುದ್ಧ ನಡೆಸುತ್ತಿರುವ ಅನಗತ್ಯ ವಿಚಾರಣೆ ಕೊನೆಗೊಳ್ಳಬೇಕು. ನಾವು ಸತ್ಯಕ್ಕೆ ಬದ್ಧರಾಗಿರುತ್ತೇವೆ' ಎಂದು ಮನೇಶಿಂದೆ ತಿಳಿಸಿದ್ದಾರೆ.</p>.<p>ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಿಯಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಡ್ರಗ್ಸ್ ಜಾಲದೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.</p>.<p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ದೀಪೇಶ್ ಸಾವಂತ್ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರಿಗೂ ಜಾಮೀನು ದೊರೆತಿದೆ. ಆದರೆ, ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.</p>.<p>ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರಿಯಾ ಪರ ವಕೀಲ ಸತೀಶ್ ಮನೇಶಿಂದೆ, 'ಬಾಂಬೆ ಹೈಕೋರ್ಟ್ ನೀಡಿರುವ ಆದೇಶದಿಂದ ನಾವು ಸಂತೋಷಗೊಂಡಿದ್ದೇವೆ. ಸತ್ಯ ಮತ್ತು ನ್ಯಾಯವು ಮೇಲುಗೈ ಸಾಧಿಸಿದೆ' ಎಂದು ಹೇಳಿದ್ದಾರೆ.</p>.<p>'ರಿಯಾಳ ಬಂಧನ ಕಾನೂನಿನ ವ್ಯಾಪ್ತಿಯನ್ನು ಮೀರಿತ್ತು. ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಎನ್ಸಿಬಿ ಸಂಸ್ಥೆಗಳು ರಿಯಾ ವಿರುದ್ಧ ನಡೆಸುತ್ತಿರುವ ಅನಗತ್ಯ ವಿಚಾರಣೆ ಕೊನೆಗೊಳ್ಳಬೇಕು. ನಾವು ಸತ್ಯಕ್ಕೆ ಬದ್ಧರಾಗಿರುತ್ತೇವೆ' ಎಂದು ಮನೇಶಿಂದೆ ತಿಳಿಸಿದ್ದಾರೆ.</p>.<p>ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಿಯಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>