<p><strong>ನವದೆಹಲಿ:</strong> ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ರಿಯಾ ಚಕ್ರವರ್ತಿಗೆ ಕ್ಷಮೆಯಾಚಿಸಬೇಕು ಎಂದು ಬಾಲಿವುಡ್ ನಟಿ ದಿಯಾ ಮಿರ್ಜಾ ಆಗ್ರಹಿಸಿದ್ದಾರೆ. </p><p>ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಸಂಬಂಧ ಮಾಧ್ಯಮಗಳು ರಿಯಾ ಚಕ್ರವರ್ತಿಗೆ ತೀವ್ರ ನೋವು ಮತ್ತು ಕಿರುಕುಳ ನೀಡಿವೆ ಎಂದು ದಿಯಾ ಮಿರ್ಜಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. </p><p>‘ನೀವು (ಮಾಧ್ಯಮದವರು) ಕೇವಲ ಟಿಆರ್ಪಿ ಗಳಿಸುವ ಉದ್ದೇಶದಿಂದ ರಿಯಾಗೆ ತೀವ್ರ ನೋವು ಮತ್ತು ಕಿರುಕುಳ ನೀಡಿದ್ದೀರಿ. ನೀವು ಮಾಡಬಹುದಾದ ಕನಿಷ್ಠ ಕೆಲಸ ಎಂದರೆ ರಿಯಾಗೆ ಕ್ಷಮೆಯಾಚಿಸುವುದಾಗಿದೆ’ ಎಂದು ದಿಯಾ ಹೇಳಿದ್ದಾರೆ. </p>. <p>ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎರಡು ಪ್ರತ್ಯೇಕ ಮುಕ್ತಾಯ ವರದಿಗಳನ್ನು ಸಲ್ಲಿಸಿದೆ. </p><p>ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ಅರೋಪಿಸಿ ನಟನ ತಂದೆ ಕೆ.ಕೆ.ಸಿಂಗ್ ನೀಡಿದ ದೂರು ಮತ್ತು ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿ ಅವರು ಸುಶಾಂತ್ ಸಹೋದರಿಯರ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಬಿಐ ಶನಿವಾರ ಈ ವರದಿ ಸಲ್ಲಿಸಿದೆ.</p><p>ಕೆ.ಕೆ. ಸಿಂಗ್ ಅವರ ದೂರಿನ ಕುರಿತ ಮುಕ್ತಾಯ ವರದಿಯನ್ನು ಪಟ್ನಾದ ವಿಶೇಷ ನ್ಯಾಯಾಲಯಕ್ಕೂ, ಎರಡನೇ ಪ್ರಕರಣದ ವರದಿಯನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೂ ಸಲ್ಲಿಸಲಾಗಿದೆ.</p><p>ವರದಿಯನ್ನು ಸ್ವೀಕರಿಸಬೇಕೆ ಅಥವಾ ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐಗೆ ಆದೇಶಿಸಬೇಕೆ ಎಂಬುದನ್ನು ನ್ಯಾಯಾಲಯಗಳು ನಿರ್ಧರಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ರಿಯಾ ವಕೀಲರಾದ ಸತೀಶ್ ಮಾನೇಶಿಂದೆ ಅವರು ಮುಕ್ತಾಯ ವರದಿಯನ್ನು ಶ್ಲಾಘಿಸಿದ್ದು, ‘ಪ್ರಕರಣದ ಪ್ರತಿಯೊಂದು ಅಂಶವನ್ನು ಎಲ್ಲ ಆಯಾಮಗಳಿಂದಲೂ ಸಂಪೂರ್ಣವಾಗಿ ತನಿಖೆ ಮಾಡಿದ್ದಕ್ಕೆ‘ ಸಿಬಿಐಗೆ ಧನ್ಯವಾದ ಸಲ್ಲಿಸಿದ್ದಾರೆ.</p><p>ಸುಶಾಂತ್ ಸಿಂಗ್, 2020ರ ಜೂನ್ 14ರಂದು ಬಾಂದ್ರಾದ ಉಪನಗರ ದಲ್ಲಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮುಂಬೈ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಟ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಕೂಪರ್ ಆಸ್ಪತ್ರೆಯಲ್ಲಿ ನಡೆಸಿದ್ದ ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿತ್ತು. </p><p>ಸುಶಾಂತ್ ಆತ್ಮಹತ್ಯೆಗೆ ರಿಯಾ ಪ್ರಚೋದನೆ ನೀಡಿದ್ದಾರೆ ಮತ್ತು ನಟನ ಖಾತೆಯಿಂದ ₹15 ಕೋಟಿ ಮೊತ್ತವನ್ನು ಬೇರೆ ಖಾತೆಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿ ಕೆ.ಕೆ.ಸಿಂಗ್ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. </p><p>ದೆಹಲಿಯ ವೈದ್ಯರೊಬ್ಬರು ನೀಡಿದ ನಕಲಿ ಪ್ರಿಸ್ಕ್ರಿಪ್ಷನ್ ಆಧಾರದ ಮೇಲೆ ಸುಶಾಂತ್ ಅವರ ಸಹೋದರಿಯರು ಅವರಿಗೆ ಔಷಧಿಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಿಯಾ ಅವರು ಬಾಂದ್ರಾದಲ್ಲಿ ದೂರು ಸಲ್ಲಿಸಿದ್ದರು. ಔಷಧಿ ಸೇವಿಸಿದ ಐದು ದಿನಗಳ ಬಳಿಕ ಸುಶಾಂತ್ ಮೃತಪಟ್ಟಿದ್ದಾರೆ ಎಂದು ರಿಯಾ ಆರೋಪಿಸಿದ್ದರು. </p>.ಸುಶಾಂತ್ ಸಿಂಗ್ ಸಾವು ಪ್ರಕರಣ: ಅಂತಿಮ ವರದಿ ಸಲ್ಲಿಸಿದ ಸಿಬಿಐ.ಸುಶಾಂತ್ ಸಾವು ಪ್ರಕರಣ: ಸಿಬಿಐಗೆ ಧನ್ಯವಾದ ಸಲ್ಲಿಸಿದ ರಿಯಾ ಚಕ್ರವರ್ತಿ ಪರ ವಕೀಲರು.ಸುಶಾಂತ್ ಪ್ರಕರಣ: CBI ಲುಕ್ಔಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರಿಯಾ.ನಟ ಸುಶಾಂತ್ ಸಹೋದರಿ ವಿರುದ್ಧ ದೂರು ದಾಖಲಿಸಿದ ರಿಯಾ ಚಕ್ರವರ್ತಿ.ಸುಶಾಂತ್ ಸಿಂಗ್ 3ನೇ ಪುಣ್ಯತಿಥಿ: ನಟನ ಜೊತೆಗಿನ ಹಳೆ ವಿಡಿಯೊ ಹಂಚಿಕೊಂಡ ರಿಯಾ.ನೀವೊಬ್ಬ ವೇಶ್ಯೆ! ರಿಯಾ ಚಕ್ರವರ್ತಿಗೆ ಸುಶಾಂತ್ ಸಿಂಗ್ ತಂಗಿ ಪರೋಕ್ಷ ಹೀಯಾಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ರಿಯಾ ಚಕ್ರವರ್ತಿಗೆ ಕ್ಷಮೆಯಾಚಿಸಬೇಕು ಎಂದು ಬಾಲಿವುಡ್ ನಟಿ ದಿಯಾ ಮಿರ್ಜಾ ಆಗ್ರಹಿಸಿದ್ದಾರೆ. </p><p>ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಸಂಬಂಧ ಮಾಧ್ಯಮಗಳು ರಿಯಾ ಚಕ್ರವರ್ತಿಗೆ ತೀವ್ರ ನೋವು ಮತ್ತು ಕಿರುಕುಳ ನೀಡಿವೆ ಎಂದು ದಿಯಾ ಮಿರ್ಜಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. </p><p>‘ನೀವು (ಮಾಧ್ಯಮದವರು) ಕೇವಲ ಟಿಆರ್ಪಿ ಗಳಿಸುವ ಉದ್ದೇಶದಿಂದ ರಿಯಾಗೆ ತೀವ್ರ ನೋವು ಮತ್ತು ಕಿರುಕುಳ ನೀಡಿದ್ದೀರಿ. ನೀವು ಮಾಡಬಹುದಾದ ಕನಿಷ್ಠ ಕೆಲಸ ಎಂದರೆ ರಿಯಾಗೆ ಕ್ಷಮೆಯಾಚಿಸುವುದಾಗಿದೆ’ ಎಂದು ದಿಯಾ ಹೇಳಿದ್ದಾರೆ. </p>. <p>ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎರಡು ಪ್ರತ್ಯೇಕ ಮುಕ್ತಾಯ ವರದಿಗಳನ್ನು ಸಲ್ಲಿಸಿದೆ. </p><p>ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ಅರೋಪಿಸಿ ನಟನ ತಂದೆ ಕೆ.ಕೆ.ಸಿಂಗ್ ನೀಡಿದ ದೂರು ಮತ್ತು ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿ ಅವರು ಸುಶಾಂತ್ ಸಹೋದರಿಯರ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಬಿಐ ಶನಿವಾರ ಈ ವರದಿ ಸಲ್ಲಿಸಿದೆ.</p><p>ಕೆ.ಕೆ. ಸಿಂಗ್ ಅವರ ದೂರಿನ ಕುರಿತ ಮುಕ್ತಾಯ ವರದಿಯನ್ನು ಪಟ್ನಾದ ವಿಶೇಷ ನ್ಯಾಯಾಲಯಕ್ಕೂ, ಎರಡನೇ ಪ್ರಕರಣದ ವರದಿಯನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೂ ಸಲ್ಲಿಸಲಾಗಿದೆ.</p><p>ವರದಿಯನ್ನು ಸ್ವೀಕರಿಸಬೇಕೆ ಅಥವಾ ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐಗೆ ಆದೇಶಿಸಬೇಕೆ ಎಂಬುದನ್ನು ನ್ಯಾಯಾಲಯಗಳು ನಿರ್ಧರಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ರಿಯಾ ವಕೀಲರಾದ ಸತೀಶ್ ಮಾನೇಶಿಂದೆ ಅವರು ಮುಕ್ತಾಯ ವರದಿಯನ್ನು ಶ್ಲಾಘಿಸಿದ್ದು, ‘ಪ್ರಕರಣದ ಪ್ರತಿಯೊಂದು ಅಂಶವನ್ನು ಎಲ್ಲ ಆಯಾಮಗಳಿಂದಲೂ ಸಂಪೂರ್ಣವಾಗಿ ತನಿಖೆ ಮಾಡಿದ್ದಕ್ಕೆ‘ ಸಿಬಿಐಗೆ ಧನ್ಯವಾದ ಸಲ್ಲಿಸಿದ್ದಾರೆ.</p><p>ಸುಶಾಂತ್ ಸಿಂಗ್, 2020ರ ಜೂನ್ 14ರಂದು ಬಾಂದ್ರಾದ ಉಪನಗರ ದಲ್ಲಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮುಂಬೈ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಟ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಕೂಪರ್ ಆಸ್ಪತ್ರೆಯಲ್ಲಿ ನಡೆಸಿದ್ದ ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿತ್ತು. </p><p>ಸುಶಾಂತ್ ಆತ್ಮಹತ್ಯೆಗೆ ರಿಯಾ ಪ್ರಚೋದನೆ ನೀಡಿದ್ದಾರೆ ಮತ್ತು ನಟನ ಖಾತೆಯಿಂದ ₹15 ಕೋಟಿ ಮೊತ್ತವನ್ನು ಬೇರೆ ಖಾತೆಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿ ಕೆ.ಕೆ.ಸಿಂಗ್ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. </p><p>ದೆಹಲಿಯ ವೈದ್ಯರೊಬ್ಬರು ನೀಡಿದ ನಕಲಿ ಪ್ರಿಸ್ಕ್ರಿಪ್ಷನ್ ಆಧಾರದ ಮೇಲೆ ಸುಶಾಂತ್ ಅವರ ಸಹೋದರಿಯರು ಅವರಿಗೆ ಔಷಧಿಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಿಯಾ ಅವರು ಬಾಂದ್ರಾದಲ್ಲಿ ದೂರು ಸಲ್ಲಿಸಿದ್ದರು. ಔಷಧಿ ಸೇವಿಸಿದ ಐದು ದಿನಗಳ ಬಳಿಕ ಸುಶಾಂತ್ ಮೃತಪಟ್ಟಿದ್ದಾರೆ ಎಂದು ರಿಯಾ ಆರೋಪಿಸಿದ್ದರು. </p>.ಸುಶಾಂತ್ ಸಿಂಗ್ ಸಾವು ಪ್ರಕರಣ: ಅಂತಿಮ ವರದಿ ಸಲ್ಲಿಸಿದ ಸಿಬಿಐ.ಸುಶಾಂತ್ ಸಾವು ಪ್ರಕರಣ: ಸಿಬಿಐಗೆ ಧನ್ಯವಾದ ಸಲ್ಲಿಸಿದ ರಿಯಾ ಚಕ್ರವರ್ತಿ ಪರ ವಕೀಲರು.ಸುಶಾಂತ್ ಪ್ರಕರಣ: CBI ಲುಕ್ಔಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರಿಯಾ.ನಟ ಸುಶಾಂತ್ ಸಹೋದರಿ ವಿರುದ್ಧ ದೂರು ದಾಖಲಿಸಿದ ರಿಯಾ ಚಕ್ರವರ್ತಿ.ಸುಶಾಂತ್ ಸಿಂಗ್ 3ನೇ ಪುಣ್ಯತಿಥಿ: ನಟನ ಜೊತೆಗಿನ ಹಳೆ ವಿಡಿಯೊ ಹಂಚಿಕೊಂಡ ರಿಯಾ.ನೀವೊಬ್ಬ ವೇಶ್ಯೆ! ರಿಯಾ ಚಕ್ರವರ್ತಿಗೆ ಸುಶಾಂತ್ ಸಿಂಗ್ ತಂಗಿ ಪರೋಕ್ಷ ಹೀಯಾಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>