<p>ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹೊಸ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರತಂಡ ಸೋಮವಾರ ಕುಂಬಳಕಾಯಿ ಒಡೆದಿದೆ. ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ‘ಆ್ಯಪಲ್ ಬಾಕ್ಸ್ ಸ್ಟುಡಿಯೋಸ್’ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದೆ.</p>.<p>ಅಕ್ಟೋಬರ್ ಮೊದಲ ವಾರದಲ್ಲಷ್ಟೇ ಈ ಸಿನಿಮಾ ಸೆಟ್ಟೇರಿತ್ತು. ಊಟಿಯಲ್ಲಿ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ. ಅ.7ರಂದು ಟ್ವೀಟ್ ಮಾಡಿದ್ದ ರಮ್ಯಾ, ‘ರಾಜ್ ಇನ್ನೂ ಈ ಚಿತ್ರದ ಸ್ಕ್ರಿಪ್ಟ್ ಕೆಲಸದಲ್ಲಿದ್ದಾರೆ’ ಎಂದಿದ್ದರು. ಇದಾಗಿ ತಿಂಗಳು ಉರುಳುವುದರೊಳಗೆ ಚಿತ್ರದ ಚಿತ್ರೀಕರಣವೇ ಪೂರ್ಣಗೊಂಡಿರುವುದು ಜನರಲ್ಲಿ ಆಶ್ಚರ್ಯ ಮೂಡಿಸಿದೆ. ಈ ಬಗ್ಗೆ ಟ್ವೀಟ್ ಮೂಲಕವೇ ಪ್ರಶ್ನಿಸಿರುವ ಹಲವರು, ‘ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿತೇ ಅಥವಾ ಚಿತ್ರೀಕರಣವೇ ಪೂರ್ಣಗೊಂಡಿತೇ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಮ್ಯಾ, ಇಡೀ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ಉತ್ತರಿಸಿದ್ದಾರೆ.</p>.<p>ಈ ಸಿನಿಮಾ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ನ ಮೊದಲ ಚಿತ್ರ. ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಚಿತ್ರದಲ್ಲಿ ರಾಜ್ ಬಿ. ಶೆಟ್ಟಿಗೆ ರಮ್ಯಾ ಜೋಡಿಯಾಗಬೇಕಿತ್ತು. ಈ ಚಿತ್ರದ ಮೂಲಕವೇ ತಾವು ಚಂದನವನಕ್ಕೆ ಕಂಬ್ಯಾಕ್ ಮಾಡುತ್ತಿರುವುದಾಗಿ ರಮ್ಯಾ ಘೋಷಿಸಿದ್ದರು. ಆದರೆ ಕೊನೇ ಕ್ಷಣದಲ್ಲಿ, ‘ಹೊಸ ಮುಖವೊಂದು ಈ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಲಿದೆ’ ಎನ್ನುವ ಕಾರಣ ನೀಡಿ ಈ ಸಿನಿಮಾದಿಂದ ರಮ್ಯಾ ಹೊರ ಹೆಜ್ಜೆ ಇಟ್ಟಿದ್ದರು. ನಂತರದಲ್ಲಿ ನಾಯಕಿಯಾಗಿ ನಟಿ ಸಿರಿ ರವಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು.</p>.<p>ಚಿತ್ರಕ್ಕೆ ಕಥೆ ರಾಜ್ ಬಿ. ಶೆಟ್ಟಿ ಅವರದ್ದೇ. ರಾಜ್ ಅವರ ‘ಗರುಡ ಗಮನ ವೃಷಭ ವಾಹನ’ ಚಿತ್ರದ ತಾಂತ್ರಿಕ ತಂಡವೇ ಇಲ್ಲಿ ಕೆಲಸ ಮಾಡಲಿದೆ. ಮಿಥುನ್ ಮುಕುಂದನ್ ಅವರ ಸಂಗೀತ, ಪ್ರವೀಣ್ ಶ್ರೀಯಾನ್ ಅವರ ಸಂಗೀತ ಈ ಚಿತ್ರಕ್ಕಿದೆ. ಬಾಲಾಜಿ ಮನೋಹರ್, ರೇಖಾ ಕೂಡ್ಲಗಿ ಮುಂತಾದವರು ತಾರಾಬಳಗದಲ್ಲಿದ್ದಾರೆ.</p>.<p>ಲಿಂಕ್:</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹೊಸ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರತಂಡ ಸೋಮವಾರ ಕುಂಬಳಕಾಯಿ ಒಡೆದಿದೆ. ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ‘ಆ್ಯಪಲ್ ಬಾಕ್ಸ್ ಸ್ಟುಡಿಯೋಸ್’ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದೆ.</p>.<p>ಅಕ್ಟೋಬರ್ ಮೊದಲ ವಾರದಲ್ಲಷ್ಟೇ ಈ ಸಿನಿಮಾ ಸೆಟ್ಟೇರಿತ್ತು. ಊಟಿಯಲ್ಲಿ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದೆ. ಅ.7ರಂದು ಟ್ವೀಟ್ ಮಾಡಿದ್ದ ರಮ್ಯಾ, ‘ರಾಜ್ ಇನ್ನೂ ಈ ಚಿತ್ರದ ಸ್ಕ್ರಿಪ್ಟ್ ಕೆಲಸದಲ್ಲಿದ್ದಾರೆ’ ಎಂದಿದ್ದರು. ಇದಾಗಿ ತಿಂಗಳು ಉರುಳುವುದರೊಳಗೆ ಚಿತ್ರದ ಚಿತ್ರೀಕರಣವೇ ಪೂರ್ಣಗೊಂಡಿರುವುದು ಜನರಲ್ಲಿ ಆಶ್ಚರ್ಯ ಮೂಡಿಸಿದೆ. ಈ ಬಗ್ಗೆ ಟ್ವೀಟ್ ಮೂಲಕವೇ ಪ್ರಶ್ನಿಸಿರುವ ಹಲವರು, ‘ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿತೇ ಅಥವಾ ಚಿತ್ರೀಕರಣವೇ ಪೂರ್ಣಗೊಂಡಿತೇ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಮ್ಯಾ, ಇಡೀ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ಉತ್ತರಿಸಿದ್ದಾರೆ.</p>.<p>ಈ ಸಿನಿಮಾ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ನ ಮೊದಲ ಚಿತ್ರ. ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಚಿತ್ರದಲ್ಲಿ ರಾಜ್ ಬಿ. ಶೆಟ್ಟಿಗೆ ರಮ್ಯಾ ಜೋಡಿಯಾಗಬೇಕಿತ್ತು. ಈ ಚಿತ್ರದ ಮೂಲಕವೇ ತಾವು ಚಂದನವನಕ್ಕೆ ಕಂಬ್ಯಾಕ್ ಮಾಡುತ್ತಿರುವುದಾಗಿ ರಮ್ಯಾ ಘೋಷಿಸಿದ್ದರು. ಆದರೆ ಕೊನೇ ಕ್ಷಣದಲ್ಲಿ, ‘ಹೊಸ ಮುಖವೊಂದು ಈ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಲಿದೆ’ ಎನ್ನುವ ಕಾರಣ ನೀಡಿ ಈ ಸಿನಿಮಾದಿಂದ ರಮ್ಯಾ ಹೊರ ಹೆಜ್ಜೆ ಇಟ್ಟಿದ್ದರು. ನಂತರದಲ್ಲಿ ನಾಯಕಿಯಾಗಿ ನಟಿ ಸಿರಿ ರವಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು.</p>.<p>ಚಿತ್ರಕ್ಕೆ ಕಥೆ ರಾಜ್ ಬಿ. ಶೆಟ್ಟಿ ಅವರದ್ದೇ. ರಾಜ್ ಅವರ ‘ಗರುಡ ಗಮನ ವೃಷಭ ವಾಹನ’ ಚಿತ್ರದ ತಾಂತ್ರಿಕ ತಂಡವೇ ಇಲ್ಲಿ ಕೆಲಸ ಮಾಡಲಿದೆ. ಮಿಥುನ್ ಮುಕುಂದನ್ ಅವರ ಸಂಗೀತ, ಪ್ರವೀಣ್ ಶ್ರೀಯಾನ್ ಅವರ ಸಂಗೀತ ಈ ಚಿತ್ರಕ್ಕಿದೆ. ಬಾಲಾಜಿ ಮನೋಹರ್, ರೇಖಾ ಕೂಡ್ಲಗಿ ಮುಂತಾದವರು ತಾರಾಬಳಗದಲ್ಲಿದ್ದಾರೆ.</p>.<p>ಲಿಂಕ್:</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>