ನಟಿ ರಮ್ಯಾ ಅವರ ನಿರ್ಮಾಣದ ಚೊಚ್ಚಲ ಚಿತ್ರ, ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಇದೀಗ ಸಂಕಷ್ಟ ಎದುರಾಗಿದೆ. ಈ ಶೀರ್ಷಿಕೆಯನ್ನು ಬಳಸಕೂಡದು ಎಂದು ಆಗ್ರಹಿಸಿ ಖ್ಯಾತ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರು ತಮ್ಮ ವಕೀಲರ ಮೂಲಕ ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್ ಕಳುಹಿಸಿದ್ದಾರೆ.