‘ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ. ಕನ್ನಡಕ್ಕೊಬ್ಬ ಹೊಸ ಪ್ರತಿಭಾನ್ವಿತ ನಿರ್ದೇಶಕ ಸಿಕ್ಕಿದ್ದಾನೆ. ನಾಯಕನಾಗಿ ನಾಗಭೂಷಣ, ನಾಯಕಿಯಾಗಿ ಅಮೃತಾ ಪ್ರೇಮ್ ಮತ್ತು ಹೊಸ ಪ್ರತಿಭಾನ್ವಿತರ ದಂಡು, ಜೊತೆಗೆ ರಂಗಾಯಣ ರಘು, ತಾರ, ಬಿರಾದರ್ ಅವರಂತಹ ಮೇರು ಕಲಾವಿದರ ಹೆಗಲು ಸಿಕ್ಕಿದೆ. ಸದ್ಯದಲ್ಲೆ ನಿಮ್ಮ ಮುಂದೆ ಸಿನಿಮಾ ಬರಲಿದೆ’ ಎನ್ನುತ್ತಾರೆ ಧನಂಜಯ. ‘ನೆನಪಿರಲಿ’ ಪ್ರೇಮ್ ಪುತ್ರಿ ಅಮೃತಾ ಈ ಚಿತ್ರದ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ ಎಂದಿದೆ ಚಿತ್ರತಂಡ.