ನಟ ಹಾಗೂ ರಾಜಕಾರಣಿ ಆರ್. ಶರತ್ ಕುಮಾರ್ ‘ಬಾಲು ಅವರ ಆಕಸ್ಮಿಕ ಅಗಲಿಕೆ ನನಗೆ ಶಾಕ್ ನೀಡಿದೆ. ಸಿನಿಮಾ ಕ್ಷೇತ್ರಕ್ಕೆ ಇವರು ನೀಡಿದ ಸೇವೆ ಅಗಣ್ಯ. ಅವರು ಬಹಳ ಬೇಗ ನಮ್ಮನ್ನಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ, ಸ್ನೇಹಿತರು ಹಾಗೂ ಆತ್ಮೀಯ ಬಳಗಕ್ಕೆ ಅವರ ಸಾವಿನ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.