<p><strong>ಚೆನ್ನೈ:</strong> ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್ ಬಾಬ್ ಅವರು ಶನಿವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.</p><p>ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಅಡ್ಯಾರ್ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಹತ್ತಿರ ಮೂಲಗಳು ತಿಳಿಸಿವೆ.</p><p>ಮದನ್ ಬಾಬ್ ಎಂದೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಎಸ್.ಕೃಷ್ಣಮೂರ್ತಿ ಅವರು ಕಮಲ್ ಹಾಸನ್, ರಜನಿಕಾಂತ್, ಅಜಿತ್, ಸೂರ್ಯ ಮತ್ತು ವಿಜಯ್ ಅವರಂತಹ ಪ್ರಮುಖ ನಟರೊಂದಿಗೆ ಪರದೆ ಹಂಚಿಕೊಂಡಿದ್ದರು.</p>.<p>ಸನ್ ಟಿವಿಯಲ್ಲಿ ಪ್ರಸಾರವಾದ ‘ಅಸಥ ಪೋವತು ಯಾರು?’ ಜನಪ್ರಿಯ ಹಾಸ್ಯ ಕಾರ್ಯಕ್ರಮದ ತೀರ್ಪುಗಾರರಲ್ಲಿ ಒಬ್ಬರಾಗಿ ಬಾಬ್ ಕಾಣಿಸಿಕೊಂಡಿದ್ದರು. </p><p>‘ತೆನಾಲಿ’ ಚಿತ್ರದಲ್ಲಿನ ಡೈಮಂಡ್ ಬಾಬು, ‘ಫ್ರೆಂಡ್ಸ್’ ಚಿತ್ರದಲ್ಲಿನ ಮ್ಯಾನೇಜರ್ ಸುಂದರೇಶನ್ ಪಾತ್ರಗಳು ಜನ ಮೆಚ್ಚುಗೆಗೆ ಪಾತ್ರವಾಗಿದ್ದವು.</p><p>ಬಾಬ್ ಅವರ ಸಾವಿಗೆ ನಟ, ನೃತ್ಯ ನಿರ್ದೇಶಕ ಪ್ರಭುದೇವ ಸಂತಾಪ ವ್ಯಕ್ತಪಡಿಸಿದ್ದಾರೆ. ‘ದಯೆ, ನಗು, ಹಾಸ್ಯ ಗುಣಗಳಿಂದ ಸೆಟ್ನಲ್ಲಿದ್ದ ಎಲ್ಲರನ್ನು ನಗಿಸುತ್ತಿದ್ದರು’ ಎಂದು ನೆನಪಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್ ಬಾಬ್ ಅವರು ಶನಿವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.</p><p>ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಅಡ್ಯಾರ್ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಹತ್ತಿರ ಮೂಲಗಳು ತಿಳಿಸಿವೆ.</p><p>ಮದನ್ ಬಾಬ್ ಎಂದೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಎಸ್.ಕೃಷ್ಣಮೂರ್ತಿ ಅವರು ಕಮಲ್ ಹಾಸನ್, ರಜನಿಕಾಂತ್, ಅಜಿತ್, ಸೂರ್ಯ ಮತ್ತು ವಿಜಯ್ ಅವರಂತಹ ಪ್ರಮುಖ ನಟರೊಂದಿಗೆ ಪರದೆ ಹಂಚಿಕೊಂಡಿದ್ದರು.</p>.<p>ಸನ್ ಟಿವಿಯಲ್ಲಿ ಪ್ರಸಾರವಾದ ‘ಅಸಥ ಪೋವತು ಯಾರು?’ ಜನಪ್ರಿಯ ಹಾಸ್ಯ ಕಾರ್ಯಕ್ರಮದ ತೀರ್ಪುಗಾರರಲ್ಲಿ ಒಬ್ಬರಾಗಿ ಬಾಬ್ ಕಾಣಿಸಿಕೊಂಡಿದ್ದರು. </p><p>‘ತೆನಾಲಿ’ ಚಿತ್ರದಲ್ಲಿನ ಡೈಮಂಡ್ ಬಾಬು, ‘ಫ್ರೆಂಡ್ಸ್’ ಚಿತ್ರದಲ್ಲಿನ ಮ್ಯಾನೇಜರ್ ಸುಂದರೇಶನ್ ಪಾತ್ರಗಳು ಜನ ಮೆಚ್ಚುಗೆಗೆ ಪಾತ್ರವಾಗಿದ್ದವು.</p><p>ಬಾಬ್ ಅವರ ಸಾವಿಗೆ ನಟ, ನೃತ್ಯ ನಿರ್ದೇಶಕ ಪ್ರಭುದೇವ ಸಂತಾಪ ವ್ಯಕ್ತಪಡಿಸಿದ್ದಾರೆ. ‘ದಯೆ, ನಗು, ಹಾಸ್ಯ ಗುಣಗಳಿಂದ ಸೆಟ್ನಲ್ಲಿದ್ದ ಎಲ್ಲರನ್ನು ನಗಿಸುತ್ತಿದ್ದರು’ ಎಂದು ನೆನಪಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>