<p>ಕಿಚ್ಚ ಸುದೀಪ್ ಅವರ ಅಭಿನಯದ 'ವಿಕ್ರಾಂತ್ ರೋಣ' ಚಿತ್ರ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇಸುದೀಪ್ ಹೊಸ ಸಿನಿಮಾಘೋಷಣೆಯಾಗಿದೆ.</p>.<p>ಅಭಿಮಾನಿಗಳಿಗೆ ಸುದೀಪ್ ಮುಂದೆ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಕುತೂಹಲವಿತ್ತು. ಈಗ ಸಿನಿಮಾ ಪ್ರೇಮಿಗಳಿಗೆ ಉತ್ತರ ಸಿಕ್ಕಿದ್ದು, ತಮಿಳು ನಿರ್ದೇಶಕ ವೆಂಕಟ್ ಪ್ರಭು ಅವರು ಕಿಚ್ಚನಿಗೆ ಆ್ಯಕ್ಷನ್–ಕಟ್ ಹೇಳಲಿದ್ದಾರೆ.</p>.<p>ಕೋಟಿಗೊಬ್ಬ3 ಸಿನಿಮಾದ ಯಶಸ್ಸಿನ ಬಳಿಕ, ವಿಕ್ರಾಂತ್ ರೋಣ ಚಿತ್ರ ಕೂಡ ಬಿಡುಗಡೆಗೆ ಸಿದ್ದವಾಗಿದ್ದು ಈ ನಡುವೆ ಹೊಸ ಸಿನಿಮಾ ಘೋಷಣೆ ಮಾಡಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.</p>.<p>ಕೆಲವು ದಿನಗಳ ಹಿಂದೆ ವೆಂಕಟ್ ಪ್ರಭು ಅವರು ಬೆಂಗಳೂರಿಗೆ ಬಂದು ಸುದೀಪ್ ಅವರನ್ನು ಭೇಟಿ ಮಾಡಿ ಕತೆ ಹೇಳಿದ್ದರು. ವೆಂಕಟ್ ಪ್ರಭು ಅವರ ಕತೆ ಸುದೀಪ್ಗೆ ಇಷ್ಟವಾಗಿದ್ದು ಸಿನಿಮಾ ಮಾಡಲು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಅವರೇ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p><em><strong><a href="https://www.prajavani.net/video/entertainment/cinema/kiccha-sudeep-83-movie-kapil-dev-moments-kannada-film-news-cini-matu-896462.html" itemprop="url">ನೋಡಿ | ಸಿನಿ ಮಾತು: ಕಿಚ್ಚನ ಕನಸೇನು?</a></strong></em></p>.<p>ಈ ಚಿತ್ರ ದೊಡ್ಡಮಟ್ಟದಲ್ಲಿ ನಿರ್ಮಾಣವಾಗುತ್ತಿದ್ದು ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ತೆರೆಗೆ ಬರಲಿದೆ. ಆದಾಗ್ಯೂ ಸಿನಿಮಾ ನಿರ್ಮಾಪಕರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. </p>.<p>ವೆಂಕಟ್ ಪ್ರಭು ತಮಿಳಿನಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ಇತ್ತೀಚೆಗೆ ನಿರ್ದೇಶನ ಮಾಡಿದ್ದ 'ಮಾನಾಡು' ಚಿತ್ರ ಹಿಟ್ ಆಗಿತ್ತು.</p>.<p itemprop="name"><em><strong>ಓದಿ:<a href="https://www.prajavani.net/entertainment/cinema/vikranth-rona-release-date-announce-sudeep-acting-890009.html" itemprop="url">ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ರಿಲೀಸ್ ಡೇಟ್ ಘೋಷಣೆ</a></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಿಚ್ಚ ಸುದೀಪ್ ಅವರ ಅಭಿನಯದ 'ವಿಕ್ರಾಂತ್ ರೋಣ' ಚಿತ್ರ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇಸುದೀಪ್ ಹೊಸ ಸಿನಿಮಾಘೋಷಣೆಯಾಗಿದೆ.</p>.<p>ಅಭಿಮಾನಿಗಳಿಗೆ ಸುದೀಪ್ ಮುಂದೆ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಕುತೂಹಲವಿತ್ತು. ಈಗ ಸಿನಿಮಾ ಪ್ರೇಮಿಗಳಿಗೆ ಉತ್ತರ ಸಿಕ್ಕಿದ್ದು, ತಮಿಳು ನಿರ್ದೇಶಕ ವೆಂಕಟ್ ಪ್ರಭು ಅವರು ಕಿಚ್ಚನಿಗೆ ಆ್ಯಕ್ಷನ್–ಕಟ್ ಹೇಳಲಿದ್ದಾರೆ.</p>.<p>ಕೋಟಿಗೊಬ್ಬ3 ಸಿನಿಮಾದ ಯಶಸ್ಸಿನ ಬಳಿಕ, ವಿಕ್ರಾಂತ್ ರೋಣ ಚಿತ್ರ ಕೂಡ ಬಿಡುಗಡೆಗೆ ಸಿದ್ದವಾಗಿದ್ದು ಈ ನಡುವೆ ಹೊಸ ಸಿನಿಮಾ ಘೋಷಣೆ ಮಾಡಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.</p>.<p>ಕೆಲವು ದಿನಗಳ ಹಿಂದೆ ವೆಂಕಟ್ ಪ್ರಭು ಅವರು ಬೆಂಗಳೂರಿಗೆ ಬಂದು ಸುದೀಪ್ ಅವರನ್ನು ಭೇಟಿ ಮಾಡಿ ಕತೆ ಹೇಳಿದ್ದರು. ವೆಂಕಟ್ ಪ್ರಭು ಅವರ ಕತೆ ಸುದೀಪ್ಗೆ ಇಷ್ಟವಾಗಿದ್ದು ಸಿನಿಮಾ ಮಾಡಲು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಅವರೇ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p><em><strong><a href="https://www.prajavani.net/video/entertainment/cinema/kiccha-sudeep-83-movie-kapil-dev-moments-kannada-film-news-cini-matu-896462.html" itemprop="url">ನೋಡಿ | ಸಿನಿ ಮಾತು: ಕಿಚ್ಚನ ಕನಸೇನು?</a></strong></em></p>.<p>ಈ ಚಿತ್ರ ದೊಡ್ಡಮಟ್ಟದಲ್ಲಿ ನಿರ್ಮಾಣವಾಗುತ್ತಿದ್ದು ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ತೆರೆಗೆ ಬರಲಿದೆ. ಆದಾಗ್ಯೂ ಸಿನಿಮಾ ನಿರ್ಮಾಪಕರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. </p>.<p>ವೆಂಕಟ್ ಪ್ರಭು ತಮಿಳಿನಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರು ಇತ್ತೀಚೆಗೆ ನಿರ್ದೇಶನ ಮಾಡಿದ್ದ 'ಮಾನಾಡು' ಚಿತ್ರ ಹಿಟ್ ಆಗಿತ್ತು.</p>.<p itemprop="name"><em><strong>ಓದಿ:<a href="https://www.prajavani.net/entertainment/cinema/vikranth-rona-release-date-announce-sudeep-acting-890009.html" itemprop="url">ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ರಿಲೀಸ್ ಡೇಟ್ ಘೋಷಣೆ</a></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>